ಬ್ರೇಕಿಂಗ್ ನ್ಯೂಸ್
20-04-23 11:08 pm Bangalore Correspondent ಕರ್ನಾಟಕ
ಬೆಂಗಳೂರು, ಎ.20 : ಚುನಾವಣೆ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದ ಕ್ರಮವನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ಡಿಕೆ ಶಿವಕುಮಾರ್ ಮನವಿ ತಿರಸ್ಕೃತಗೊಂಡಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಅರ್ಜಿ ವಿಚಾರಣೆಯನ್ನು ಏಪ್ರಿಲ್ 17ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಗುರುವಾರ ತೀರ್ಪು ಪ್ರಕಟಿಸಿರುವ ಕೋರ್ಟ್ ಡಿಕೆ ಶಿವಕುಮಾರ್ ಅರ್ಜಿಯನ್ನು ತಿರಸ್ಕರಿಸಿದೆ.

ತಮ್ಮ ವಿರುದ್ಧ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದವನ್ನು ಆಲಿಸಿತ್ತು. ಹಲವು ಬಾರಿ ತಡೆಯಾಜ್ಞೆ ವಿಸ್ತರಿಸಿದ್ದ ಕೋರ್ಟ್ ಈಗ ತಡೆಯಾಜ್ಞೆ ವಿಸ್ತರಿಸಲು ಆಗಲ್ಲ ಎಂದು ಹೇಳಿದೆ.

ಮೊದಲ ವಿಚಾರಣೆಯಲ್ಲಿ ಫೆಬ್ರವರಿ 24ರ ವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶಿಸಿತ್ತು. ಬಳಿಕ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ಮಾರ್ಚ್ 31, ಏಪ್ರಿಲ್ 6, ಏಪ್ರಿಲ್ 13, ಏಪ್ರಿಲ್ 17ರ ವರೆಗೆ ವಿಸ್ತರಿಸಿತ್ತು. ಈಗ ಚುನಾವಣೆ ಹೊತ್ತಲ್ಲಿ ಅರ್ಜಿಯನ್ನು ವಜಾಗೊಳಿಸಿದ್ದು ಡಿಕೆಶಿಗೆ ಕಂಟಕ ಆಗುವಂತೆ ಮಾಡಿದೆ.
The Karnataka High Court on Thursday dismissed Congress leader DK Shivakumar plea challenging the Bharatiya Janata Party-led state government’s decision seeking a Central Bureau of Investigation (CBI) probe into the disproportionate assets case against him. Karnataka Congress chief Shivakumar, who had questioned the State government’s move, had filed an application saying that the Karnataka government’s order for the CBI probe was wrong.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm