ಚುನಾವಣೆ ಹೊತ್ತಲ್ಲಿ ಡಿಕೆಶಿಗೆ ಕಂಟಕ ; ಅಕ್ರಮ ಆಸ್ತಿ ಗಳಿಕೆ ಪ್ರಕರಣ - ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಜಾ 

20-04-23 11:08 pm       Bangalore Correspondent   ಕರ್ನಾಟಕ

ಚುನಾವಣೆ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದ ಕ್ರಮವನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ. 

ಬೆಂಗಳೂರು, ಎ.20 : ಚುನಾವಣೆ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದ ಕ್ರಮವನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ. 

ಡಿಕೆ ಶಿವಕುಮಾರ್‌ ಮನವಿ ತಿರಸ್ಕೃತಗೊಂಡಿರುವುದರಿಂದ ಚುನಾವಣೆ ಸಂದರ್ಭದಲ್ಲಿ ಅವರಿಗೆ ಸಂಕಷ್ಟ ಎದುರಾಗಿದೆ. ಡಿಕೆ ಶಿವಕುಮಾರ್ ಅರ್ಜಿ ವಿಚಾರಣೆಯನ್ನು ಏಪ್ರಿಲ್‌ 17ರಂದು ಪೂರ್ಣಗೊಳಿಸಿದ್ದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿತ್ತು. ಗುರುವಾರ ತೀರ್ಪು ಪ್ರಕಟಿಸಿರುವ ಕೋರ್ಟ್‌ ಡಿಕೆ ಶಿವಕುಮಾರ್‌ ಅರ್ಜಿಯನ್ನು ತಿರಸ್ಕರಿಸಿದೆ. 

Attara Kacheri - Wikipedia

ತಮ್ಮ ವಿರುದ್ಧ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಅರ್ಜಿದಾರರ ಪರ ಹಾಗೂ ಸಿಬಿಐ ಪರ ವಕೀಲರ ವಾದವನ್ನು ಆಲಿಸಿತ್ತು. ಹಲವು ಬಾರಿ ತಡೆಯಾಜ್ಞೆ ವಿಸ್ತರಿಸಿದ್ದ ಕೋರ್ಟ್ ಈಗ ತಡೆಯಾಜ್ಞೆ ವಿಸ್ತರಿಸಲು ಆಗಲ್ಲ ಎಂದು ಹೇಳಿದೆ. 

CBI raids educational institution owned by Karnataka Congress President  Shivakumar | India News – India TV

ಮೊದಲ ವಿಚಾರಣೆಯಲ್ಲಿ ಫೆಬ್ರವರಿ 24ರ ವರೆಗೂ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶಿಸಿತ್ತು. ಬಳಿಕ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ಮಾರ್ಚ್‌ 31, ಏಪ್ರಿಲ್ 6, ಏಪ್ರಿಲ್ 13, ಏಪ್ರಿಲ್ 17ರ ವರೆಗೆ ವಿಸ್ತರಿಸಿತ್ತು. ಈಗ ಚುನಾವಣೆ ಹೊತ್ತಲ್ಲಿ ಅರ್ಜಿಯನ್ನು ವಜಾಗೊಳಿಸಿದ್ದು ಡಿಕೆಶಿಗೆ ಕಂಟಕ ಆಗುವಂತೆ ಮಾಡಿದೆ.

The Karnataka High Court on Thursday dismissed Congress leader DK Shivakumar plea challenging the Bharatiya Janata Party-led state government’s decision seeking a Central Bureau of Investigation (CBI) probe into the disproportionate assets case against him. Karnataka Congress chief Shivakumar, who had questioned the State government’s move, had filed an application saying that the Karnataka government’s order for the CBI probe was wrong.