ಬ್ರೇಕಿಂಗ್ ನ್ಯೂಸ್
23-04-23 12:15 pm Bangalore Correspondent ಕರ್ನಾಟಕ
ಬೆಂಗಳೂರು, ಎ.23: ಕಿರುತೆರೆಯ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'ಯಲ್ಲಿ ನಟಿಸಿ ಫೇಮಸ್ ಆಗಿದ್ದ ಹಾಗೂ ಸಾಕಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದ ಸಂಪತ್ ಜಯರಾಮ್ ಅವರು ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಶನಿವಾರ ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸಂಪತ್ ಅವರಿಗೆ 1 ವರ್ಷದ ಹಿಂದೆಯಷ್ಟೇ ಮದುವೆ ಆಗಿತ್ತು. ಯುವ ನಟನ ನಿಧನಕ್ಕೆ ಸ್ನೇಹಿತರು, ಆಪ್ತರು ಕಂಬನಿ ಮಿಡಿದಿದ್ದಾರೆ.
ಮೂಲಗಳ ಪ್ರಕಾರ, ಸಂಪತ್ಗೆ ಸರಿಯಾದ ಸಿನಿಮಾದ ಅವಕಾಶಗಳು ಸಿಕ್ಕಿರಲಿಲ್ಲವಂತೆ. ಆ ಹಿನ್ನೆಲೆಯಲ್ಲಿ ಅವರು ತೀವ್ರ ಬೇಸರ ಮಾಡಿಕೊಂಡಿದ್ದರು ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಈ ದುಡುಕಿನ ನಿರ್ಧಾರ ತೆಗೆದುಕೊಂಡರೇ ಎಂಬ ಅನುಮಾನ ಮೂಡಿದೆ.

ಈಚೆಗಷ್ಟೇ ತೆರೆಕಂಡ 'ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ' ಸಿನಿಮಾದಲ್ಲಿ ಸಂಪತ್ ಒಂದು ಮುಖ್ಯ ಪಾತ್ರ ಮಾಡಿದ್ದರು. ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿ, ನಿರ್ದೇಶನ ಮಾಡಿದವರು ರಾಜೇಶ್ ಧ್ರುವ. ಇದೀಗ ಸ್ನೇಹಿತನ ದುರಂತ ಅಂತ್ಯಕ್ಕೆ ಕಂಬನಿ ಮಿಡಿದಿರುವ ರಾಜೇಶ್ ಧ್ರುವ ಅವರು, 'ಲೋ ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ.. ಅದೆಷ್ಟೋ ಸಿನಿಮಾ ಮಾಡೋದಿದೆ, ಅದೆಷ್ಟೋ ಜಗಳ ಬಾಕಿ ಇದೆ, ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ ಲೋ, ಇನ್ನೂ ನಿನ್ನ ದೊಡ್ಡ್ ದೊಡ್ಡ್ ಸ್ಟೇಜ್ನಲ್ಲಿ ನೋಡೋದ್ ಇದೆ ಕಣೋ, ಮುಚ್ಕೊಂಡು ಬಾರೋ ವಾಪಾಸ್ ಪ್ಲೀಸ್..' ಎಂದು ಭಾವುಕರಾಗಿ ಪೋಸ್ಟ್ ಹಾಕಿದ್ದಾರೆ.
ಲೋ ಮಗಾ ನಿನ್ನ ಅಗಲಿಕೆ ಸುದ್ದಿ ಕೇಳಿ ಜೀವ ಒಂತರ ಸಂಕಟದಲ್ಲಿ ಒದ್ದಾಡ್ತಾ ಇದೆ. ನನ್ನ ಸ್ನೇಹಕ್ಕೆ ಒಂದು ಸ್ಫೂರ್ತಿ ನೀನು. ಸದಾ ನನ್ನ ದಾರಿಯಲ್ಲಿ ಶಕ್ತಿಯಾಗಿ ಇರುತ್ತಿದ್ದೆ ಯಾಕೋ ಆ ದೇವರು ಹೀಗೆ ಮಾಡಿಬಿಟ್ಟ. ಸಂಪತ್ ಮಿಸ್ ಮಾಡಿಕೊಳ್ಳೋ ಜೀವ ನೀನಲ್ಲ. ಆದರೆ ಬೇರೆ ದಾರಿನೂ ಇಲ್ಲ. ಆ ದೇವರು ನಿನ್ನ ಆತ್ಮಕ್ಕೆ ಶಾಂತಿ ನೀಡಲಿ' ಎಂದು ಗಣೇಶ್ ನಾಯ್ಕ್ ಎಂಬ ಅವರ ಮತ್ತೋರ್ವ ಸ್ನೇಹಿತರು ಪೋಸ್ಟ್ ಹಂಚಿಕೊಂಡಿದ್ದಾರೆ. ಸಂಪತ್ ಜಯರಾಮ್ ಅಗಲಿಕೆ ಅವರ ಸ್ನೇಹಿತರಿಗೆ, ಕುಟುಂಬ ವರ್ಗದವರಿಗೆ ಅಪಾರ ನೋವನ್ನುಂಟು ಮಾಡಿದೆ. ಕನ್ನಡ ಚಿತ್ರರಂಗದಲ್ಲಿ ಮಿಂಚಿಬೇಕಿದ್ದ ಪ್ರತಿಭೆಯೊಂದು ಬಹುಬೇಗನೇ ತನ್ನ ಬದುಕನ್ನು ಅಂತ್ಯಗೊಳಿಸಿಕೊಂಡಿದೆ.
Actor Sampath Jayaram, known for his work in television and cinema, passed away by suicide on April 22 in Bengaluru. Sampath had made a name for himself over the past few years through his roles in TV serials and had also featured in a select few films.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm