ಬ್ರೇಕಿಂಗ್ ನ್ಯೂಸ್
25-04-23 05:08 pm HK News Desk ಕರ್ನಾಟಕ
ಮಂಡ್ಯ, ಎ.25: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ. ಈ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಶವಗಳನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five persons from Bengaluru, including two children, are believed to have drowned in VC canal at Doddakottagere village near Basaralu in Mandya taluk of Karnataka on April 25.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm