ಬ್ರೇಕಿಂಗ್ ನ್ಯೂಸ್
25-04-23 05:08 pm HK News Desk ಕರ್ನಾಟಕ
ಮಂಡ್ಯ, ಎ.25: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ. ಈ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಶವಗಳನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five persons from Bengaluru, including two children, are believed to have drowned in VC canal at Doddakottagere village near Basaralu in Mandya taluk of Karnataka on April 25.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm