ಬ್ರೇಕಿಂಗ್ ನ್ಯೂಸ್
25-04-23 05:08 pm HK News Desk ಕರ್ನಾಟಕ
ಮಂಡ್ಯ, ಎ.25: ತಾಲೂಕಿನಲ್ಲಿ ಮಂಗಳವಾರ ನಡೆದ ದಾರುಣ ಘಟನೆಯೊಂದರಲ್ಲಿ, ಐವರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಂಡ್ಯದ ಬಸರಾಳು ಹೋಬಳಿಯ ದೊಡ್ಡಕೊತ್ತಗೆರೆಯ ಗ್ರಾಮದ ವಿಶ್ವೇಶ್ವರಯ್ಯ ನಾಲೆಯಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರನ್ನು ಹನ್ಸಿಯಾ ಬೇಗಂ, ಮಹತಾಬ್, ತಸ್ಮಿಯಾ, ಅಶ್ರಫ್ ಮತ್ತು ಅತೀಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ನೀಲಸಂದ್ರದ ನಿವಾಸಿಗಳಾದ ಮಕ್ಕಳು, ರಂಜಾನ್ ಹಬ್ಬ ಆಚರಿಸಲು ಮಂಡ್ಯದ ಹಳ್ಳಗೆರೆ ಗ್ರಾಮದ ಅಜ್ಜಿ ಮನೆಗೆ ಬಂದಿದ್ದರು. ನಾಲೆಗೆ ಆಟವಾಡಲೆಂದು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಕ್ಕಳಿಗೆ ಶಾಲೆಗೆ ರಜೆಯಿದ್ದ ಕಾರಣ ಕುಟುಂಬ ಸಮೇತ ನೆಂಟರ ಮನೆಗೆ ಬಂದಿದ್ದರು. ಈ ವೇಳೆ, ಮನೆಗೆ ಬಂದಿದ್ದ ಎಲ್ಲರೂ ಎರಡು ಕಾರಿನಲ್ಲಿ ಬಸರಾಳು ಬಳಿ ಇರುವ ಕಾವೇರಿ ನಾಲೆಗೆ ಈಜಲು ಹೋಗಿದ್ದಾರೆ. ಈಜಲೆಂದು ನೀರಿಗೆ ಧುಮುಕಿದಾಗ ಅವಘಡ ಸಂಭವಿಸಿದೆ. ಈ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ಶವಗಳನ್ನು ನಾಲೆಯಿಂದ ಹೊರಕ್ಕೆ ತೆಗೆದಿದ್ದು, ಉಳಿದ ಇಬ್ಬರು ಮಕ್ಕಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಈ ನಡುವೆ ಬಸರಾಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five persons from Bengaluru, including two children, are believed to have drowned in VC canal at Doddakottagere village near Basaralu in Mandya taluk of Karnataka on April 25.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm