ಬ್ರೇಕಿಂಗ್ ನ್ಯೂಸ್
25-04-23 10:24 pm Bangalore Correspondent ಕರ್ನಾಟಕ
ಬೆಂಗಳೂರು, ಎ.25 : ರಾಜ್ಯ ಸರ್ಕಾರ ಇತ್ತೀಚೆಗೆ ಮುಸ್ಲಿಮ್ ಸಮುದಾಯಕ್ಕಿದ್ದ ಶೇ.4ರ ಮೀಸಲು ರದ್ದು ಪಡಿಸಿ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದ್ದು ಮೇ 9ರ ವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ದೇಶನ ನೀಡಿದೆ. ಚುನಾವಣೆ ಹೊತ್ತಲ್ಲಿ ಈ ರೀತಿಯ ಆದೇಶ ನೀಡಿರುವುದು ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಿದೆ.
ಸುಪ್ರೀ ಕೋರ್ಟ್ ಮುಂದಿನ ವಿಚಾರಣೆಯನ್ನು ಮೇ 9 ಕ್ಕೆ ನಿಗದಿಪಡಿಸಿದ್ದು ಅಂದು ರಾಜ್ಯ ಸರ್ಕಾರದ ಅಭಿಪ್ರಾಯ ನೀಡಲು ಸೂಚಿಸಿದೆ. ಕರ್ನಾಟಕದಲ್ಲಿ ಒಬಿಸಿ ಕೋಟಾದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಶೇ.4 ಮೀಸಲಾತಿ ಜಾರಿಯಲ್ಲಿತ್ತು. ಕಳೆದ ಮಾರ್ಚ್ 27 ರಂದು ಕರ್ನಾಟಕ ಸರ್ಕಾರವು ಈ ಮೀಸಲನ್ನು ರದ್ದುಪಡಿಸಿ, ಅದರ ಪಾಲನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ ಶೇ.2 ರಂತೆ ಹಂಚಿಕೆ ಮಾಡಿ ಮೀಸಲು ಹೆಚ್ಚಿಸಿತ್ತು.
ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿ ಕೋಟಾವನ್ನು ರದ್ದುಗೊಳಿಸಿದ ಸರ್ಕಾರದ ಆದೇಶ ದೋಷಪೂರಿತ ಕ್ರಮ ಎಂದು ಸುಪ್ರೀಂ ಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿ ಅಭಿಪ್ರಾಯ ಪಟ್ಟಿತ್ತು. ಅಲ್ಲದೆ, ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿತ್ತು. ಮಂಗಳವಾರ ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ವಿವರಣೆ ನೀಡಲು ವಿಫಲವಾಗಿದ್ದು ಅರ್ಜಿದಾರರ ವಾದ ಆಲಿಸಿದ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಹಾಗೂ ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠ ಆದೇಶಕ್ಕೆ ತಡೆ ನೀಡಿ ತೀರ್ಪು ಪ್ರಕಟಿಸಿದೆ.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು. ಕಳೆದ ಮಾರ್ಚ್ 27 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಈ ಆದೇಶವನ್ನು ಪ್ರಶ್ನಿಸಿ ಎಲ್. ಗುಲಾಮ್ ರಸೂಲ್ ಮತ್ತು ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮುಸ್ಲಿಮರ ಮೀಸಲನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರ ಅವರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯುಎಸ್) ಪಟ್ಟಿಗೆ ಸೇರಿಸುವ ನಿರ್ಧಾರವನ್ನು ತೆಗೆದುಕೊಂಡಿತ್ತು.
The Supreme Court on Tuesday directed that the Karnataka government’s decision to scrap four percent quota for Muslims will not be implemented till May 9 after the state sought time to file its reply. A bench of Justices KM Joseph and BV Nagarathna said the earlier regime of four percent quota to Muslims will continue to hold field till May 9, when the matter will be heard next, without any prejudice to the contentions to be raised by the state government.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm