ಬ್ರೇಕಿಂಗ್ ನ್ಯೂಸ್
26-04-23 06:49 pm HK News Desk ಕರ್ನಾಟಕ
ಮಂಡ್ಯ, ಎ.26 : ದೇಶವನ್ನು 1947ರಲ್ಲಿ ಧರ್ಮದ ಆಧಾರದಲ್ಲಿ ವಿಭಜಿಸಲಾಗಿತ್ತು. ಮತ್ತೊಮ್ಮೆ ದೇಶ ಧರ್ಮದ ಕಾರಣಕ್ಕೆ ವಿಭಜನೆಯಾಗುವುದನ್ನು ನಾವು ಬಯಸುವುದಿಲ್ಲ. ಅದಕ್ಕಾಗಿ ದೇಶದಲ್ಲಿ ಬಿಜೆಪಿ ಆ ರೀತಿಯ ಮೀಸಲಾತಿಯನ್ನು ವಿರೋಧಿಸುತ್ತದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಂಡ್ಯದಲ್ಲಿ ಬುಧವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಯೋಗಿ, ಕರ್ನಾಟಕ ಸರ್ಕಾರ ಧರ್ಮ ಆಧರಿತ ಮುಸ್ಲಿಂ ಮೀಸಲಾತಿ ರದ್ದುಪಡಿಸಿದ್ದನ್ನು ನೇರವಾಗಿ ಉಲ್ಲೇಖಿಸದೆ, ಆ ರೀತಿಯ ಮೀಸಲಾತಿ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದರು. ಉತ್ತರ ಪ್ರದೇಶ ಮತ್ತು ಕರ್ನಾಟಕದ ಸಂಬಂಧ ಇಂದು ನಿನ್ನೆಯದಲ್ಲ. ರಾಮನ ಕಾಲ ತ್ರೇತಾಯುಗದಿಂದಲೂ ಈ ಸಂಬಂಧ ಇದೆ. ಭಗವಾನ್ ಶ್ರೀರಾಮನ ಸಹಾಯಕನಾಗಿದ್ದ ಹನುಮಂತ ಕರ್ನಾಟಕದ ನೆಲದಲ್ಲಿ ಜನಿಸಿದ್ದ. ಆತನ ವಾಸಸ್ಥಾನ ಆಗಿದ್ದ ಅಂಜನಾದ್ರಿ ಪರ್ವತ ಕರ್ನಾಟಕದಲ್ಲಿದೆ. ಆ ಕಾರಣಕ್ಕೆ ಉತ್ತರ ಪ್ರದೇಶದ ಅಯೋಧ್ಯೆ ಮತ್ತು ಕರ್ನಾಟಕಕ್ಕೆ ಸಂಬಂಧ ಇದೆ ಎಂದರು.


ಕೇಂದ್ರ - ರಾಜ್ಯಗಳ “ಡಬಲ್ ಇಂಜಿನ್ ಸರ್ಕಾರ”ದಿಂದಾಗಿ ಉತ್ತರ ಪ್ರದೇಶದಲ್ಲಿ ಕಳೆದ ಆರು ವರ್ಷಗಳಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ. ಕೇಂದ್ರ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ದೇಶದ್ರೋಹಿ ಪಿಎಫ್ಐ ಸಂಘಟನೆಯನ್ನು ನಿಷೇಧಿಸಲಾಗಿದೆ. ಇಸ್ಲಾಮಿಕ್ ಭಯೋತ್ಪಾದನೆಯನ್ನು ಬೆನ್ನು ಮುರಿದಿದ್ದೇವೆ ಎಂದರು.




'ಡಬಲ್ ಇಂಜಿನ್’ ಸರಕಾರ ಒಂದು ಕೇಂದ್ರದಲ್ಲಿ ಮತ್ತು ಇನ್ನೊಂದು ತನ್ನ ತವರು ರಾಜ್ಯದಲ್ಲಿ ಸಾಧ್ಯವಾದಷ್ಟು ಪ್ರಬಲವಾಗಿ ತೋರಿಸಿದೆ. ಉತ್ತರ ಪ್ರದೇಶದಲ್ಲಿ ಭದ್ರತೆ ಮತ್ತು ಸಮೃದ್ಧಿಯ ಭರವಸೆ ಇದೆ. ಕರ್ಫ್ಯೂ ಇಲ್ಲ ಮತ್ತು ಗಲಭೆಯೂ ಇಲ್ಲ. ಅಲ್ಲಿ ಎಲ್ಲವೂ ಚೆನ್ನಾಗಿದೆ. ಕಳೆದ ಆರು ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಯಾವುದೇ ಗಲಭೆ ನಡೆದಿಲ್ಲ ಎಂದರು. ಬಿಜೆಪಿ ನಂಬಿರುವ ‘ಏಕ್ ಭಾರತ್, ಶ್ರೇಷ್ಠ ಭಾರತ’ ಪರಿಕಲ್ಪನೆ ಭಾರತವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ. ನಾವು ತುಷ್ಟೀಕರಣ ಮೂಲಕ ಯಾರನ್ನೂ ಸಮಾಧಾನ ಪಡಿಸುವುದರಲ್ಲಿ ನಂಬಿಕೆ ಇರಿಸಿಲ್ಲ. ಆದರೆ ಸಬಲೀಕರಣದಲ್ಲಿ ನಂಬಿಕೆ ಇರಿಸಿದೆ ಎಂದರು. ಮಂಡ್ಯದಲ್ಲಿ ನಡೆದ ರೋಡ್ ಶೋದಲ್ಲಿ ಭಾರೀ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮಂಡ್ಯ ಸಂಸದೆ ಸುಮಲತಾ ಕೂಡ ಯೋಗಿ ಜೊತೆಗೆ ರೋಡ್ ಶೋ ನಡೆಸಿದ್ದು ವಿಶೇಷವಾಗಿತ್ತು.
In his first election rally in poll-bound Karnataka, Uttar Pradesh Chief Minister Yogi Adityanath on Wednesday attacked the Congress over religion-based reservation saying that it was against the Constitution. He also claimed that no riots took place in Uttar Pradesh in the past six years due to the strong ''double engine government".
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm