ಬ್ರೇಕಿಂಗ್ ನ್ಯೂಸ್
30-04-23 09:10 pm HK News Desk ಕರ್ನಾಟಕ
ಮೈಸೂರು, ಎ.30: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸರಣಿ ಪ್ರಚಾರ ಸಮಾವೇಶ, ರೋಡ್ ಶೋಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರನ್ನು ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿದ ಪ್ರಧಾನಿ ಇಂದು ಸಾಂಸ್ಕೃತಿಕ ರಾಜಧಾನಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿದರು. ನಗರದ ವಿದ್ಯಾಪೀಠದಿಂದ ತೆರೆದ ವಾಹನದಲ್ಲಿ ಮೋದಿ ರೋಡ್ ಶೋ ನಡೆಸುತ್ತಿದ್ದು, ಭಾರೀ ಜನಸ್ತೋಮವೇ ನೆರೆದಿದೆ. ರಸ್ತೆಯ ಇಕ್ಕೆಲ್ಲಗಳಲ್ಲಿ ಕಿಕ್ಕಿರಿದು ತುಂಬಿದ ಜನರು, ಮೋದಿ ಮೋದಿ ಘೋಷಣೆ ಮೊಳಗಿಸುತ್ತಾ ತೆರೆದ ವಾಹನದ ಮೇಲೆ ಹೂಮಳೆ ಸುರಿದರು.
ಬನ್ನಿಮಂಟಪದ ಎಲ್ ಐಸಿ ಸರ್ಕಲ್ ನಲ್ಲಿ ರೋಡ್ ಶೋ ಅಂತ್ಯವಾಗಬೇಕಿತ್ತು. ಆದರೆ, ಸಮಯದ ಅಭಾವದಿಂದಾಗಿ ಹೈವೇ ಸರ್ಕಲ್ ವರೆಗೂ ಮಾತ್ರ ಮೋದಿ ರೋಡ್ ಶೋ ನಡೆಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಎಸ್ ಎ ರಾಮದಾಸ್ ಹಾಗೂ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ತೆರೆದ ವಾಹನದಲ್ಲಿದ್ದು, ಮೋದಿ ಅವರಿಗೆ ಸಾಥ್ ನೀಡಿದರು.
ರೋಡ್ ಶೋ ವೇಳೆ ಭದ್ರತಾ ಲೋಪ ಎದುರಾಗಿದೆ. ಮೋದಿ ಅವರು ತೆರೆದ ವಾಹನದಲ್ಲಿ ತೆರಳುತ್ತಿದ್ದ ವೇಳೆ ಜನರ ಕಡೆಯಿಂದ ತೂರಿ ಬಂದ ಮೊಬೈಲ್ ವಾಹನ ಮೇಲೆ ಬಿದ್ದಿದೆ. ಪ್ರಧಾನಿ ಮೋದಿ ಅವರು ಜನರತ್ತ ಕೈ ಬೀಸುತ್ತಿದ್ದ ಸಂದರ್ಭದಲ್ಲಿ ಜನರು ಪ್ರಧಾನಿಗಳತ್ತ ಹೂ ಎಸೆಯುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಏಕಾಏಕಿ ಹೂವಿನೊಂದಿಗೆ ಮೊಬೈಲ್ ಕೂರ ತೂರಿ ಬಂದಿದೆ. ಇದನ್ನು ಮೋದಿ ಅವರು ಗಮನಿಸಿದ್ದು, ಬಳಿಕ ಮೋದಿ ಅವರ ಪಕ್ಕದಲ್ಲೇ ನಿಂತಿದ್ದ ಭದ್ರತಾ ಸಿಬ್ಬಂದಿ ಮೊಬೈಲ್ ಬಿದಿದ್ದನ್ನು ಗಮನಿಸಿದ್ದಾರೆ.
ಮೈಸೂರಿನ ಕೆಆರ್ ಸರ್ಕಲ್ ಬಳಿಯ ಚಿಕ್ಕ ಗಡಿಯಾರದ ಬಳಿ ಘಟನೆ ನಡೆದಿದ್ದು, ಪ್ರಚಾರ ವಾಹನದ ಮೇಲೆ ಬಿದ್ದ ಮೊಬೈಲ್ ಬಳಿಕ ರಸ್ತೆ ಮೇಲೆ ಬಿದ್ದಿದೆ. ಇದನ್ನು ಗಮನಿಸಿದ ಮೋದಿ ಅವರು ಭದ್ರತಾ ಸಿಬ್ಬಂದಿಗೆ ಸೂಚನೆ ನೀಡಿರುವುದು ದೃಶ್ಯಗಳಲ್ಲಿ ಸೆರೆಯಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿಗಳು ಎಚ್ಚೆತ್ತುಕೊಂಡಿದ್ದಾರೆ. ನರೇಂದ್ರ ಮೋದಿ ಹೋಗುತ್ತಿದ್ದ ವಾಹನದ ಮೇಲೆ ಮೊಬೈಲ್ ಎಸೆದ ವಿಚಾರ ಸಂಬಂಧಿಸಿದಂತೆ ಭದ್ರತೆಯಲ್ಲಿದ್ದ ಪೊಲೀಸರಿಗೆ ಟೆನ್ಸನ್ ಶುರುವಾಗಿದೆ. ಯಾರು ಮೊಬೈಲ್ ಎಸೆದರು? ಎಲ್ಲಿಂದ ಮೊಬೈಲ್ ತೂರಿ ಬಂತು? ಎಂಬ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ.
ಇಂದು ನಿಗದಿತ ಸಮಯಕ್ಕಿಂತ ಸುಮಾರು 45 ನಿಮಿಷ ಕಾಲ ತಡವಾಗಿ ರೋಡ್ ಶೋ ಆರಂಭವಾಗಿತ್ತು. ವಿದ್ಯಾಪೀಠ ವೃತ್ತಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾಜಿ ಸಚಿವರಾದ ಕೆಎಸ್ ಈಶ್ವರಪ್ಪ ಮತ್ತು ಮಾಜಿ ಸಚಿವ ಎಸ್ಎ ರಾಮದಾಸ್ ಅವರು ಪ್ರಚಾರ ವಾಹನದಲ್ಲಿ ತೆರಳಿದರು. ವಿದ್ಯಾಪೀಠದಿಂದ ಆರಂಭವಾದ ರೋಡ್ ಶೋ ಹೈವೆ ವೃತ್ತದವರೆಗೂ ಸುಮಾರು 4 ಕಿಲೋ ಮೀಟರ್ ಸಾಗಿಬಂದು ಅಂತ್ಯವಾಗಿದೆ. ರೋಡ್ ಶೋ ಮುಗಿಯುತ್ತಿದ್ದಂತೆ ವಾಹನದಿಂದ ಕೆಳಗೆ ಇಳಿದ ಪ್ರಧಾನಿಗಳು ಜನರತ್ತ ಕೈ ಬೀಸುತ್ತಾ ತಮ್ಮ ವಾಹನದತ್ತ ತೆರಳಿದರು.
Prime Minister Narendra Modi conducted a mega roadshow in Mysuru, winding up his whirlwind two-day campaign tour of Karnataka during which he addressed six public rallies. In what appeared to be a rerun of sorts of the popular ‘Jambu Savari’ witnessed on the last day of the annual Mysuru Dasara, the Prime Minister’s roadshow passed through various parts of the city.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am