ಬ್ರೇಕಿಂಗ್ ನ್ಯೂಸ್
01-05-23 03:14 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1 : ಅಸೆಂಬ್ಲಿ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ, ಕಾಂಗ್ರೆಸ್ ರೀತಿಯಲ್ಲೇ ಜನರನ್ನು ಓಲೈಸಲು ಉಚಿತಗಳ ಮೊರೆ ಹೋಗಿದೆ. ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ 5 ಕೆಜಿ ಸಿರಿಧಾನ್ಯ ವಿತರಣೆ ಮಾಡುವುದಾಗಿ ಹೇಳಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನೂ ನೀಡಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
.jpg)
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಹೇಳಿದರು.
ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್ ಸಿಲಿಂಡರ್, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ, ಪೋಷಣೆ ಯೋಜನೆ’ಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್ ವಿತರಿಸುವ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ, 1 ಸಾವಿರ ಕೃಷಿ ಉತ್ಪಾದನಾ ಕೇಂದ್ರ ಸ್ಥಾಪನೆ ಮತ್ತು ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ, ಐದು ಲಕ್ಷದ ಆರೋಗ್ಯ ವಿಮೆ ಮೊತ್ತ 10 ಲಕ್ಷಕ್ಕೆ ಹೆಚ್ಚಳ, ತಾಲ್ಲೂಕುಗಳಲ್ಲಿ ಕಿಮೋಥೆರಪಿ, ಡಯಾಲಿಸಿಸ್ ಸೌಲಭ್ಯ ನೀಡುವ ಭರವಸೆಯನ್ನೂ ನೀಡಿದೆ.
JP Nadda, the national president of Bharatiya Janata Party, on Monday released the party's manifesto for the upcoming Karnataka state elections, promising freebies including milk and cooking gas cylinders and implementation of Uniform Civil Code (UCC) in the southern state if the saffron party is back in power.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 01:34 pm
HK News Staffer
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm