ಬ್ರೇಕಿಂಗ್ ನ್ಯೂಸ್
01-05-23 03:14 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1 : ಅಸೆಂಬ್ಲಿ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ, ಕಾಂಗ್ರೆಸ್ ರೀತಿಯಲ್ಲೇ ಜನರನ್ನು ಓಲೈಸಲು ಉಚಿತಗಳ ಮೊರೆ ಹೋಗಿದೆ. ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ 5 ಕೆಜಿ ಸಿರಿಧಾನ್ಯ ವಿತರಣೆ ಮಾಡುವುದಾಗಿ ಹೇಳಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನೂ ನೀಡಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
.jpg)
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಹೇಳಿದರು.
ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್ ಸಿಲಿಂಡರ್, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ, ಪೋಷಣೆ ಯೋಜನೆ’ಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್ ವಿತರಿಸುವ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ, 1 ಸಾವಿರ ಕೃಷಿ ಉತ್ಪಾದನಾ ಕೇಂದ್ರ ಸ್ಥಾಪನೆ ಮತ್ತು ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ, ಐದು ಲಕ್ಷದ ಆರೋಗ್ಯ ವಿಮೆ ಮೊತ್ತ 10 ಲಕ್ಷಕ್ಕೆ ಹೆಚ್ಚಳ, ತಾಲ್ಲೂಕುಗಳಲ್ಲಿ ಕಿಮೋಥೆರಪಿ, ಡಯಾಲಿಸಿಸ್ ಸೌಲಭ್ಯ ನೀಡುವ ಭರವಸೆಯನ್ನೂ ನೀಡಿದೆ.
JP Nadda, the national president of Bharatiya Janata Party, on Monday released the party's manifesto for the upcoming Karnataka state elections, promising freebies including milk and cooking gas cylinders and implementation of Uniform Civil Code (UCC) in the southern state if the saffron party is back in power.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm