ಬ್ರೇಕಿಂಗ್ ನ್ಯೂಸ್
01-05-23 03:14 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1 : ಅಸೆಂಬ್ಲಿ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ, ಕಾಂಗ್ರೆಸ್ ರೀತಿಯಲ್ಲೇ ಜನರನ್ನು ಓಲೈಸಲು ಉಚಿತಗಳ ಮೊರೆ ಹೋಗಿದೆ. ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ 5 ಕೆಜಿ ಸಿರಿಧಾನ್ಯ ವಿತರಣೆ ಮಾಡುವುದಾಗಿ ಹೇಳಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನೂ ನೀಡಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
.jpg)
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್ ಅವರು, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಹೇಳಿದರು.
ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್ ಸಿಲಿಂಡರ್, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ, ಪೋಷಣೆ ಯೋಜನೆ’ಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ, ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್ ವಿತರಿಸುವ ಘೋಷಣೆ ಮಾಡಿದೆ. ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ, 1 ಸಾವಿರ ಕೃಷಿ ಉತ್ಪಾದನಾ ಕೇಂದ್ರ ಸ್ಥಾಪನೆ ಮತ್ತು ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ, ಐದು ಲಕ್ಷದ ಆರೋಗ್ಯ ವಿಮೆ ಮೊತ್ತ 10 ಲಕ್ಷಕ್ಕೆ ಹೆಚ್ಚಳ, ತಾಲ್ಲೂಕುಗಳಲ್ಲಿ ಕಿಮೋಥೆರಪಿ, ಡಯಾಲಿಸಿಸ್ ಸೌಲಭ್ಯ ನೀಡುವ ಭರವಸೆಯನ್ನೂ ನೀಡಿದೆ.
JP Nadda, the national president of Bharatiya Janata Party, on Monday released the party's manifesto for the upcoming Karnataka state elections, promising freebies including milk and cooking gas cylinders and implementation of Uniform Civil Code (UCC) in the southern state if the saffron party is back in power.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm