ಬ್ರೇಕಿಂಗ್ ನ್ಯೂಸ್
01-05-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 1 : ರಾಜ್ಯದ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿರುವಾಗ ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರನ್ನು ಕೆಣಕಲು ಹೊರಟ ಕಾಂಗ್ರೆಸ್, ಹೊಸ ಅಭಿಯಾನ ಆರಂಭಿಸಿದೆ. 'CryPM payCM' ಎಂಬ ಹೆಸರಿನಲ್ಲಿ ರಾಜ್ಯದ ಸಿಎಂ ಬೊಮ್ಮಾಯಿ ಮತ್ತು ಪ್ರಧಾನಿ ಮೋದಿಯನ್ನು ಲೇವಡಿ ಮಾಡಿದೆ.
ಚುನಾವಣೆ ಘೋಷಣೆಯ ಎರಡು ತಿಂಗಳು ಹಿಂದೆಯೇ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮತ್ತು ಸಿಎಂ ಬೊಮ್ಮಾಯಿ ಅವರನ್ನು ಅಣಕಿಸಿ ಪೇ ಸಿಎಂ ಅಭಿಯಾನ ನಡೆಸಿತ್ತು. ಅದಕ್ಕೆ ಭಾರೀ ಪ್ರತಿಕ್ರಿಯೆ ಸಿಕ್ಕಿದ್ದಲ್ಲದೆ, ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿತ್ತು. ಇದೀಗ ಮತದಾನಕ್ಕೆ ಕೆಲವೇ ದಿನಗಳಿರುವಂತೆ ಕಾಂಗ್ರೆಸ್ ಹೊಸ ಅಭಿಯಾನ ಆರಂಭಿಸಿದೆ. ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ಕರ್ನಾಟಕ ರಾಜ್ಯದಲ್ಲಿ "ಮೋದಿ ಸುನಾಮಿ" ಎದ್ದಿದೆ. ಈ ಸುನಾಮಿಗೆ ಕಾಂಗ್ರೆಸ್ ಹೆದರಿದೆ ಎಂದು ಟೀಕಿಸಿದೆ.
ಮೊದಲು ಕಾಂಗ್ರೆಸ್ ನಮ್ಮನ್ನು 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಕರೆದರು. ನಮ್ಮ ವಿರುದ್ಧ ಈ ಪೇಸಿಎಂ ಅಭಿಯಾನವನ್ನೂ ನಡೆಸಿದ್ರು. ಈ ಅಭಿಯಾನಗಳು ಜನಸಾಮಾನ್ಯರನ್ನು ತಲುಪಲು ವಿಫಲವಾಗಿವೆ. ರಾಜ್ಯದಲ್ಲಿ ಬಿಜೆಪಿಯ ಜನಪ್ರಿಯತೆಯಿಂದ ವಿಚಲಿತರಾಗಿರುವ ಕಾಂಗ್ರೆಸ್, ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ಮೋದಿ ವಿರುದ್ಧ ಅಪಪ್ರಚಾರಕ್ಕೆ ಮುಂದಾಗಿದೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಕಲಬುರಗಿಯಲ್ಲಿ ಕಳೆದ ಗುರುವಾರ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ವಿಷಪೂರಿತ ಹಾವಿನಂತೆ, ಅದು ವಿಷವೋ ಅಲ್ಲವೋ ಎಂದು ನೀವು ಪರಿಶೀಲಿಸಬಹುದು. ಆದರೆ ನೀವು ಒಂದು ಹನಿ ನೆಕ್ಕಿದರೆ ನೀವು ಸತ್ತು ಹೋಗುತ್ತೀರಿ" ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದರು. ಜೊತೆಗೆ ಪ್ರಧಾನಿ ಇದನ್ನೇ ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಧಾನಿ ಮೋದಿಯನ್ನು ನಿಂದಿಸುವುದು ಮತ್ತು ಅವಮಾನಿಸುವುದು ಕಾಂಗ್ರೆಸ್ ನಾಯಕರ ಏಕೈಕ ಉದ್ದೇಶ. ಪ್ರಧಾನಿ ಮೋದಿ ನಾಯಕತ್ವದಿಂದ ಪ್ರಪಂಚದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ. ಅವರು ಕೇವಲ ದೇಶದ ನಾಯಕರಲ್ಲ, ವಿಶ್ವ ನಾಯಕರಾಗಿದ್ದಾರೆ. ಕಾಂಗ್ರೆಸ್ನ ಏಕೈಕ ಗುರಿ ಪ್ರಧಾನಿ ಮೋದಿಯನ್ನು ನಿಂದಿಸುವುದು ಎಂದು ಕಿಡಿಕಾರಿದ್ದಾರೆ.
Minutes after Congress leader Priyanka Gandhi Vadra referred to Prime Minister Narendra Modi's remarks about verbal abuse during a poll rally in Karnataka's Bagalkote on Sunday, #CryPMPayCM started trending on Twitter. Priyanka said one has to take such attacks in their stride in public life and asked PM Modi to learn from her brother and disqualified MP Rahul Gandhi, who "is ready to take a bullet for the sake of the country".
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am