ಬ್ರೇಕಿಂಗ್ ನ್ಯೂಸ್
02-05-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿದ್ದಾರೆಂದು ಯಡಿಯೂರಪ್ಪ ಹೇಳುತ್ತಿದ್ದಾರೆ. ಆದರೆ ಇದೇ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ 2013 ರಲ್ಲಿ ದೆಹಲಿಯ ಹೋಟೆಲ್ ಒಂದರಲ್ಲಿ ಒಬ್ಬರನ್ನು ಭೇಟಿಯಾಗಿದ್ದರು. ಅವರು ಯಾರು ಎಂಬುದನ್ನು ನೆನಪಿಸಿಕೊಳ್ಳಲಿ. ಆ ಬಗ್ಗೆ ಸದ್ಯದಲ್ಲೇ ಮಾಹಿತಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಅಂದು ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಭೇಟಿಯಾದ ವ್ಯಕ್ತಿ ಯಾರು ಎಂಬುದನ್ನು ಮೂರ್ನಾಲ್ಕು ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.


ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ತಮ್ಮ ಗುರಿ ಮಾಡುವುದರಲ್ಲಿ ಅರ್ಥವಿಲ್ಲ. ವೀರಶೈವ- ಲಿಂಗಾಯತ ಸಮುದಾಯದ ಬೇರೆ ಮುಖಂಡರನ್ನು ತರುವುದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂತೋಷ್ ಸಂಚು ರೂಪಿಸಿದ್ದರು. ಇವರೇ ಸೇರಿ ಶೆಟ್ಟರ್, ಸವದಿಯನ್ನು ಬಿಜೆಪಿ ತೊರೆಯುವಂತೆ ಮಾಡಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದ್ದಾರೆ.

ಶೆಟ್ಟರ್ ಮತ್ತು ಸವದಿ ಕಾಂಗ್ರೆಸ್ ಸೇರಿ ಬಿಜೆಪಿ ಬೆನ್ನಿಗೆ ಚೂರಿ ಹಾಕಿದ್ದೀರಿ ಎಂದು ಆರೋಪಿಸಿರುವ ನೀವು (ಯಡಿಯೂರಪ್ಪ) 2013ರಲ್ಲಿ ಕೆಜೆಪಿ ಆರಂಭಿಸಿದಾಗ ಬಿಜೆಪಿಯ ಎದೆಗೆ ಚೂರಿ ಹಾಕಿಲ್ಲವೇ ಎಂದು ಪ್ರಶ್ನಿಸಿದರು. ಇದು ವೀರಶೈವ -ಲಿಂಗಾಯತ ಸಮುದಾಯಕ್ಕೆ ತವರು ಮನೆಯಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 130-140 ಸ್ಥಾನಗಳನ್ನು ಗೆಲ್ಲಲಿದೆ ಎಂದವರು ಹೇಳಿದ್ದಾರೆ.
1990ರಲ್ಲಿ ಸಮುದಾಯದ ನಾಯಕ ವೀರೇಂದ್ರ ಪಾಟೀಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ನಿರ್ಧಾರವನ್ನು ಪಾಟೀಲ್ ಸಮರ್ಥಿಸಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಬದಲಿಸಲಾಗಿತ್ತು. ಬೇರೇನು ದುರುದ್ದೇಶ ಇರಲಿಲ್ಲ ಎಂದು ಹೇಳಿದರು. ಆದರೆ, ಯಡಿಯೂರಪ್ಪನವರು ಚೆನ್ನಾಗಿದ್ದರೂ ಬಿಜೆಪಿ ಅವರನ್ನು ಏಕೆ ಅಧಿಕಾರದಿಂದ ಕೆಳಗಿಳಿಸಿತು ಎಂದು ಪ್ರಶ್ನಿಸಿದರು.
ಶೆಟ್ಟರ್ ಮತ್ತು ಸವದಿ ಅವರನ್ನು ಸೋಲಿಸಲು ಯಡಿಯೂರಪ್ಪ ಅವರನ್ನು ನಿಯೋಜಿಸಲಾಗಿದೆ. ಯಡಿಯೂರಪ್ಪ ಅವರು ತಮ್ಮ ಇಬ್ಬರು ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಹೆದರಿ ಈ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ದೂರಿದ್ದಾರೆ.
M B Patil slams BJP, says Yediyurappa and Shobha Karandlaje had met someone in the hotel in 2013 in Delhi, asks who is it.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm