ಬ್ರೇಕಿಂಗ್ ನ್ಯೂಸ್
02-05-23 02:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್ ವಿರುದ್ದ ಬಿಜೆಪಿ ನಾಯಕರು ಕಿಡಿಕಾರಿದ್ದು, ನಿಮಗೆ ತಾಕತ್ ಇದ್ರೆ ಬಜರಂಗದಳ ಸಂಘಟನೆ ನಿಷೇಧಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಆರ್ಎಸ್ಎಸ್ನ ಒಂದು ಭಾಗ ಬಿಜೆಪಿ, ಯುವಕರ ಸಂಘಟನೆ ಬಜರಂಗದಳ, ದೇಶಸೇವೆಗೆ ಮುಡಿಪಾಗಿಟ್ಟ ಒಂದು ಸಂಘಟನೆ. ಇವತ್ತು ಬಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೋರಿಸಿ ಕಾಂಗ್ರೆಸ್ ದೇಶದ್ರೋಹದ ಕೆಲಸ ಮಾಡಿದೆ. ಪಿಎಫ್ಐ ಜತೆ ದೇಶಪ್ರೇಮಿ ಬಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಬಜರಂಗದಳ ನಿಷೇಧ ಮಾಡಿ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿಯೂ ಆಗಿರುವ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಾನು ಬಜರಂಗದಳದ ಕಾರ್ಯಕರ್ತೆ, ತಾಕತ್ ಇದ್ದರೆ ನನ್ನನ್ನೂ ಅರೆಸ್ಟ್ ಮಾಡಿ. ವಿನಾಶಕಾಲೇ ವಿಪರೀತ ಬುದ್ಧಿ ಅನ್ನುವಂತೆ ಕಾಂಗ್ರೆಸ್ ನಡೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ವಿನಾಶ ಕಾಲ ಸಮೀಪಿಸಿದೆ. ಪಿಎಫ್ಐ ನಿಷೇಧ ಈಗಾಗಲೇ ಕೇಂದ್ರ ಸರ್ಕಾರ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡುತ್ತೇವೆ, ಜತೆಗೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಬಜರಂಗದಳ. ನೀವು ಪಿಎಫ್ಐ ಅನ್ನು ಬಜರಂಗದಳದ ಜೊತೆ ಹೋಲಿಕೆ ಮಾಡ್ತೀರಾ? ಬಜರಂಗದಳ ಬ್ಯಾನ್ ಮಾಡುವ ನಿಮ್ಮ ಶಕ್ತಿ ತೋರಿಸಿ ಆಗ ನಾವೂ ದೇಶಾದ್ಯಂತ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದಾರೆ.
Shobha Karandlaje slams Congress manifesto says ban Bajrang Dal if you have guts let me see she Challanged. According to the party, “law and Constitution is sacrosanct and can not be violated by individuals and organisations like Bajrang Dal, PFI or others promoting enmity or hatred, whether among majority or minority communities."
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am