ಬ್ರೇಕಿಂಗ್ ನ್ಯೂಸ್
02-05-23 04:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್ಎಎಲ್ ಏರ್ಪೋರ್ಟ್ನಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಡಿಕೆ ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಸಂದರ್ಶನ ನಡೆಸುವಾಗ ಈ ಅವಘಡ ಸಂಭವಿಸಿದೆ. ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ. ರಣಹದ್ದು ಬಡಿದ ತಕ್ಷಣ ಹೆಲಿಕಾಪ್ಟರ್ ಗಾಜು ಪುಡಿಪುಡಿಯಾಗಿದ್ದು, ಒಂದು ಕ್ಷಣ ಡಿಕೆ ಶಿವಕುಮಾರ್ ಹಾಗೂ ವರದಿಗಾರನ ಮುಖದಲ್ಲಿ ಆತಂಕ ಆವರಿಸಿತ್ತು. ಖಾಸಗಿ ವಾಹಿನಿಯ ಛಾಯಾಗ್ರಾಹಕನಿಗೆ ಗಾಜಿನ ಚೂರು ಚುಚ್ಚಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದ ಡಿಕೆಶಿ!
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದೊಡ್ಡ ಹದ್ದು ಒಂದು ಬಂದು ಹೆಲಿಕಾಪ್ಟರ್ ಗ್ಲಾಸ್ಗೆ ಹೊಡೆಯಿತು. ಹೊಸಕೋಟೆ ಹತ್ತಿರ ತೆರಳುತ್ತಿರುವಾಗ ಅವಘಡ ಸಂಭವಿಸಿದೆ. ಘಟನೆಯಿಂದಾಗಿ ಹೆಲಿಕಾಪ್ಟರ್ ಗ್ಲಾಸ್ ಬ್ಲ್ಯಾಸ್ಟ್ ಆಗಿದೆ. ಪೈಲಟ್ ನಿಧಾನವಾಗಿಯೇ ಕೆಳಗೆ ಇಳಿಸಿದ್ದಾರೆ. ಸದ್ಯಕ್ಕೆ ಎಚ್ಎಎಲ್ಗೆ ವಾಪಸ್ ಆಗಿದ್ದೇನೆ. ಎಲ್ಲರೂ ಕೂಡ ಸುರಕ್ಷಿತವಾಗಿಯೇ ವಾಪಸಾಗಿದ್ದೇವೆ ಎಂದು ಹೇಳಿದ್ದಾರೆ.
Karnataka Pradesh Congress Committee (KPCC) president DK Shivakumar suffered a bird hit to his helicopter on the way to Mulabagilu for an election rally on Tuesday. An eagle collided with the leader's chopper 's near the Jakkur airport, the Karnataka Congress said.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am