ಬ್ರೇಕಿಂಗ್ ನ್ಯೂಸ್
03-05-23 04:02 pm HK News Desk ಕರ್ನಾಟಕ
ಮೈಸೂರು, ಮೇ 3 : ಮೈಸೂರಿನಲ್ಲಿ ಉದ್ಯಮಿಯಾಗಿರುವ ಪುತ್ತೂರು ಮೂಲದ ಸುಬ್ರಹ್ಮಣ್ಯ ರೈ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಸುಬ್ರಹ್ಮಣ್ಯ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸೋದರನಾಗಿದ್ದು ಮೈಸೂರಿನಲ್ಲಿ ಬಿಲ್ಡರ್ ಆಗಿದ್ದಾರೆ. ಮಂಗಳವಾರ ಸುಬ್ರಹ್ಮಣ್ಯ ರೈ ಅವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ ಸುಬ್ರಹ್ಮಣ್ಯ ರೈ ಮನೆಯ ಅಂಗಳದ ಗಿಡದಲ್ಲಿ ಹಣ್ಣಿನ ಬಾಕ್ಸ್ನಲ್ಲಿ ಬಚ್ಚಿಡಲಾಗಿದ್ದ 1 ಕೋಟಿ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಲ್ಲಿ ಸಿಹಿ ತಿಂಡಿ ಮಾರಾಟ ಮಳಿಗೆಯ ಮೇಲೂ ಐಟಿ ರೇಡ್ ಮಾಡಿದ್ದಾರೆ. ಬಾಂಬೆ ಟಿಫಾನಿಸ್ ಸಿಹಿ ತಿಂಡಿ ಅಂಗಡಿ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಮೈಸೂರಿನ ಡಿ. ದೇವರಾಜ ಅರಸು ರಸ್ತೆಯ ಬಾಂಬೆ ಟಿಫಾನಿಸ್ ಅನಿಲ್ ಎಂಬುವರ ಮಾಲೀಕತ್ವದಲ್ಲಿರುವ ಸಂಸ್ಥೆ, ಯಾದಗಿರಿಯಲ್ಲಿರುವ ನಿವಾಸ ಹಾಗೂ ಆರ್.ಟಿ.ಓ. ಕಚೇರಿ ಬಳಿ ಇರುವ ನಿವಾಸಗಳ ಮೇಲೂ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ದೇವರಾಜ ಅರಸು ರಸ್ತೆ, ಸಿದ್ದಾರ್ಥ ನಗರ, ಜೆಪಿ ನಗರದಲ್ಲಿರುವ ಶಾಖೆಗಳು ಹಾಗೂ ತಯಾರಿಕಾ ಘಟಕದಲ್ಲೂ ಪರಿಶೀಲನೆ ನಡೆಸಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಬೆಂಗಳೂರು ಸೇರಿದಂತೆ 5 ಪ್ರಮುಖ ನಗರದಲ್ಲಿ ಬೃಹತ್ ಐಟಿ ದಾಳಿ ನಡೆದಿದೆ.

ಬಿಜೆಪಿ ಹತಾಶೆಯಿಂದ ಐಟಿ ರೇಡ್ ಮಾಡಿಸಿದೆ ; ಅಶೋಕ್ ರೈ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಶೋಕ್ ರೈ, ನನ್ನ ಅಣ್ಣನ ಮನೆಗೆ ಐಟಿ ದಾಳಿ ಆಗಿರುವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಸಹೋದರ ಒಳ್ಳೆಯ ಬಿಝಿನೆಸ್ ಮ್ಯಾನ್, ಹಾಗೆಯೇ ಒಳ್ಳೆಯ ಟ್ಯಾಕ್ಸ್ ಪೇಯರ್, ಅವನ ಮನೆ ಮೇಲಿನ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಕಚೇರಿ, ಮನೆಗೆ ಐಟಿ ರೈಡ್ ಆದ್ರೂ ನನ್ನಲ್ಲಿ ಅಧಿಕಾರಿಗಳಿಗೆ ಏನೂ ಸಿಕ್ಕಿಲ್ಲ. ಕಾರಣ ನಾನು ವರ್ಷಕ್ಕೆ ಎಷ್ಟೋ ಕೋಟಿ ತೆರಿಗೆ ಕಟ್ಟುತ್ತಿದ್ದೇನೆ. ಬಿಜೆಪಿ ಚುನಾವಣೆ ಮೊದಲೇ ಸೋಲೊಪ್ಪಿಕೊಂಡಿದ್ದು ಹತಾಶೆಯಿಂದ ಐಟಿ ದಾಳಿ ಮಾಡಿಸಿದೆ ಎಂದು ಹೇಳಿದ್ದಾರೆ.
The Income Tax (I-T) department has conducted a raid at the residence of K Subrahmanya Rai in Mysuru, brother of Ashok Rai congress candidate of Puttur from Congress, Seizing Rs 1 crore cash that was hung from a small tree at the veranda of the house.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm