ಬ್ರೇಕಿಂಗ್ ನ್ಯೂಸ್
04-05-23 04:18 pm HK News Desk ಕರ್ನಾಟಕ
ಹೊನ್ನಾವರ, ಮೇ 4 : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉತ್ತರ ಕನ್ನಡ ಜಿಲ್ಲೆ ಪ್ರವಾಸದಲ್ಲಿದ್ದಾರೆ. ಈ ಸಂದರ್ಭ ಹೊನ್ನಾವರದ ರಾಮತೀರ್ಥ ಬಳಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಸಂದರ್ಭ ಸ್ಮೋಕ್ ಕ್ಯಾಂಡಲ್ ಪರೀಕ್ಷೆ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಈ ಪ್ರಯೋಗ ಮಾಡುವಾಗ ಬೆಂಕಿ, ಹೊಗೆ ಕಾಣಿಸುತ್ತದೆ. ಇದು ಇಂದು ಸ್ವಲ್ಪ ಜಾಸ್ತಿಯೇ ಆಗಿ, ಹುಲ್ಲಿನ ಬಣವೆಗೆ ಬೆಂಕಿ ಹಿಡಿಯಿತು. ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದರು.
ಹೆಲಿಕಾಪ್ಟರ್ ಪಕ್ಕದಲ್ಲಿಯೇ ಸಮೀಪ ಹರಡಿದ್ದ ಹುಲ್ಲಿಗೆ ಬೆಂಕಿ ಹತ್ತಿಕೊಂಡ ಕಾರಣ ಒಂದು ಕ್ಷಣ ಆತಂಕದ ವಾತಾವರಣವೂ ನಿರ್ಮಾಣವಾಗಿತ್ತು. ಹೆಲಿಕಾಪ್ಟರ್ಗೆ ಸಿಗ್ನಲ್ ಕೊಡುವ ಸ್ಮೊಕ್ ಕ್ಯಾಂಡಲ್ನಿಂದ ಹೆಲಿಪ್ಯಾಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಹೊನ್ನಾವರದ ಸೇಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಆಯೋಜಿಸಿರುವ ಸಭೆಯಲ್ಲಿ ಭಾಗಿಯಾಗಲು ಡಿಕೆ ಶಿವಕುಮಾರ್ ಆಗಮಿಸಿದ್ದರು. ಡಿ.ಕೆ.ಶಿವಕುಮಾರ್ ಮೈಸೂರಿನಿಂದ ಹೊನ್ನಾವರಕ್ಕೆ ಆಗಮಿಸಿದ್ದರು.


ಡಿಕೆಶಿ ಅವರೂ ಬಜರಂಗದಳ ನಿಷೇಧದ ಹೇಳಿಕೆಯಿಂದ ಸುದ್ದಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಾಗ ಹೆಲಿಕಾಪ್ಟರ್ಗೆ ಏನಾದರೂ ಸಂಭವಿಸುವುದರ ಕುರಿತು ಅವರು ಜ್ಯೋತಿಷಿಗಳ ಮೊರೆ ಹೋಗಿರುವ ಕುರಿತು ಸುದ್ದಿಯಾಗಿತ್ತು. ಮೇ 2ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದು, ಮುಂಭಾಗದ ಗಾಜು ಪುಡಿ ಪುಡಿಯಾಗಿತ್ತು, ಪೈಲಟ್ ಸಮಯ ಪ್ರಜ್ಞೆಯಿಂದ ಸುರಕ್ಷಿತವಾಗಿ ಹೆಚ್ಎಎಲ್ನಲ್ಲಿ ಇಳಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಡಿಕೆಶಿ ದೇವರ ಮೊರೆ ಹೋಗಿದ್ದರು. ಖ್ಯಾತ ಜ್ಯೋತಿಷಿ ದ್ವಾರಕನಾಥ್ ಅವರು ಪಂಚ ಪಕ್ಷಿ ಶಾಸ್ತ್ರ ಪರಿಣಿತ ಗಜೇಂದ್ರ ಅವರೊಂದಿಗೆ ಚರ್ಚೆ ಮಾಡಿದ್ದರು. ಹದ್ದು ಮೃತಪಟ್ಟ ದೋಷವನ್ನು ಪರಿಹರಿಸಿಕೊಳ್ಳಲು, ಹಲಸೂರಿನಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ರುದ್ರಾಭಿಷೇಕ ಮಾಡಬೇಕು ಎಂದು ಸಲಹೆ ನೀಡಿದ ಕುರಿತು ವರದಿಯಾಗಿತ್ತು.
Sudden fire catches at Helipad in Honnavar as DK Shivakumar lands. Just few days ago DK Shivakumar helicopter had rammed an Eagle in the air.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm