ಬ್ರೇಕಿಂಗ್ ನ್ಯೂಸ್
08-05-23 11:42 am Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಿದೆ. ಈ ಬಾರಿ ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದರೆ ಅಚ್ಚರಿ ಎನ್ನುವಂತೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಗಿಟ್ಟಿಸಿದೆ.
ಚಿತ್ರದುರ್ಗ ಗರಿಷ್ಠ ಫಲಿತಾಂಶವನ್ನು ಪಡೆದುಕೊಂಡಿದೆ. ಎರಡನೆಯ ಸ್ಥಾನ ಮಂಡ್ಯ, ಮೂರನೇ ಸ್ಥಾನ ಹಾಸನ ಜಿಲ್ಲೆಗೆ ಸಿಕ್ಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿ ಇದೆ. ಕೊನೆಯ ಸ್ಥಾನ ಯಾದಗಿರಿ ಜಿಲ್ಲೆಯಾಗಿದೆ. ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕರು ಶೇ80.08ರಷ್ಟು ಉತ್ತೀರ್ಣರಾಗಿದ್ದಾರೆ. ಚಿತ್ರದುರ್ಗ 96.80%, ಹಾಸನ 96.68%, ಮಂಡ್ಯ 96.74%, ಯಾದಗಿರಿ 75.49% ರಷ್ಟು ಫಲಿತಾಂಶ ಗಿಟ್ಟಿಸಿದೆ.
SSLCಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ;
ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು,
ಯಶಸ್ಗೌಡ- ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ,
ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ, ಸವದತ್ತಿ,
ಬೀಮನಗೌಡ ಪಾಟೀಲ್-ವಿಜಯಪುರ 625 ಅಂಕದಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್(SMS) ಮೂಲಕ ಫಲಿತಾಂಶವನ್ನು ಕಳುಹಿಸಲಾಗುತ್ತದೆ. ಮೊಬೈಲ್ ನಲ್ಲೂ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?
ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್ಸೈಟ್ ತೆರೆಯಬೇಕು.
ಮುಖಪುಟದಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು. ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್ಲೋಡ್ ಮಾಡಿಕೊಳ್ಳಬಹುದು.
SSLC result 2023, 83.89% pass, girl fare better; Chitradurga bags top, Udupi in 18th rank, Dakshina Kannada falls down at 19th rank. The Class 10 SSLC exams for the year 2023 were conducted from March 31 to April 15.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am