ಬ್ರೇಕಿಂಗ್ ನ್ಯೂಸ್
08-05-23 11:42 am Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಿದೆ. ಈ ಬಾರಿ ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದರೆ ಅಚ್ಚರಿ ಎನ್ನುವಂತೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಗಿಟ್ಟಿಸಿದೆ.
ಚಿತ್ರದುರ್ಗ ಗರಿಷ್ಠ ಫಲಿತಾಂಶವನ್ನು ಪಡೆದುಕೊಂಡಿದೆ. ಎರಡನೆಯ ಸ್ಥಾನ ಮಂಡ್ಯ, ಮೂರನೇ ಸ್ಥಾನ ಹಾಸನ ಜಿಲ್ಲೆಗೆ ಸಿಕ್ಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿ ಇದೆ. ಕೊನೆಯ ಸ್ಥಾನ ಯಾದಗಿರಿ ಜಿಲ್ಲೆಯಾಗಿದೆ. ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕರು ಶೇ80.08ರಷ್ಟು ಉತ್ತೀರ್ಣರಾಗಿದ್ದಾರೆ. ಚಿತ್ರದುರ್ಗ 96.80%, ಹಾಸನ 96.68%, ಮಂಡ್ಯ 96.74%, ಯಾದಗಿರಿ 75.49% ರಷ್ಟು ಫಲಿತಾಂಶ ಗಿಟ್ಟಿಸಿದೆ.
SSLCಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು ;
ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು,
ಯಶಸ್ಗೌಡ- ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ,
ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ, ಸವದತ್ತಿ,
ಬೀಮನಗೌಡ ಪಾಟೀಲ್-ವಿಜಯಪುರ 625 ಅಂಕದಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್(SMS) ಮೂಲಕ ಫಲಿತಾಂಶವನ್ನು ಕಳುಹಿಸಲಾಗುತ್ತದೆ. ಮೊಬೈಲ್ ನಲ್ಲೂ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?
ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್ಸೈಟ್ ತೆರೆಯಬೇಕು.
ಮುಖಪುಟದಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು. ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್ಲೋಡ್ ಮಾಡಿಕೊಳ್ಳಬಹುದು.
SSLC result 2023, 83.89% pass, girl fare better; Chitradurga bags top, Udupi in 18th rank, Dakshina Kannada falls down at 19th rank. The Class 10 SSLC exams for the year 2023 were conducted from March 31 to April 15.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm