ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಕೊನೆ ದಿನದ ಪ್ರಚಾರ ; ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯರಂತೆ ಸಂಚಾರ, ಗ್ರಾಹಕರ ಜೊತೆ ಕಾಫಿ ಕುಡಿದು ರಾಹುಲ್ ಸಿಂಪ್ಲಿಸಿಟಿ 

08-05-23 05:53 pm       Bangalore Correspondent   ಕರ್ನಾಟಕ

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು.

ಬೆಂಗಳೂರು, ಮೇ 8: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿರುವ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಭಾನುವಾರ ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಕನ್ನಿಂಗ್​​ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು, ಬಳಿಕ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿದರು. ಸುಮಾರು 6 ಕಿಮೀಗೂ ಹೆಚ್ಚು ದೂರ ಬಸ್‍ನಲ್ಲೇ ಪ್ರಯಾಣ ಬೆಳೆಸಿದ್ದಾರೆ.

ಬಿಎಂಟಿಸಿ ಬಸ್ ನಲ್ಲಿ ಜನ ಸಾಮಾನ್ಯರೊಂದಿಗೆ ಪ್ರಯಾಣಿಸುವ ಮೂಲಕ ಕರ್ನಾಟಕದ ಬಗ್ಗೆ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಯತ್ನಿಸಿದರು.

ಬಸ್ ನಲ್ಲಿಯೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಗೃಹಲಕ್ಷ್ಮಿ ಯೋಜನೆ, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್ ಖಾತರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಚರ್ಚಿಸಿದರು.

ಬೆಂಗಳೂರಿನ ಹೋಟೆಲ್‌ನಲ್ಲಿ ಡೆಲಿವರಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಮಾಜಿ ಸಂಸದ ರಾಹುಲ್ ಗಾಂಧಿ, ಡೆಲಿವರಿ ಕೆಲಸಗಾರರ ಜೀವನ, ಸ್ಥಿರ ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಚರ್ಚಿಸಿದರು.

Senior Congress leader Rahul Gandhi hopped on to a BMTC bus in Bengaluru and interacted with commuters on Monday. Before he got on to the bus, the former party chief stopped for a cup of coffee at a 'Cafe Coffee Day' outlet on Cunningham Road.