ಬ್ರೇಕಿಂಗ್ ನ್ಯೂಸ್
10-05-23 12:04 pm HK News Desk ಕರ್ನಾಟಕ
ಮೈಸೂರು, ಮೇ 10: ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ ಎಂದು ಮಾಜಿ ಮುಖ್ಯಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಮತಹಕ್ಕು ಚಲಾಯಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡುವ ಪಕ್ಷಕ್ಕೆ ಮತ ನೀಡುವಂತೆ ಮತದಾರರಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. ರಾಷ್ಟ್ರದ ಭವಿಷ್ಯ ಈ ಚುನಾವಣೆಯಲ್ಲಿ ಅಡಗಿದೆ. ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ವಿಶ್ವಾಸವಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಈ ಸಂಖ್ಯೆ 150ಕ್ಕೆ ಹೋದರೂ ಹೋಗಬಹುದು ಎಂದು ಹೇಳಿದರು.
ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇ.60ಕ್ಕೂ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸ ನನಗಿದೆ. ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ. ರಾಜಕೀಯದಿಂದ ನಾನು ನಿವೃತ್ತಿಯಾಗುವುದಿಲ್ಲ. ಆದರೆ, ಮುಂಬರವ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ತಿಳಿಸಿದರು.
ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಅವರು ಕುಟುಂಬದೊಂದಿಗೆ ಮತದಾನ ಮಾಡಿದರು. ಕಳೆದ ಬಾರಿ ಅವರ ಪುತ್ರ ಯತೀಂದ್ರ ಶಾಸಕರಾಗಿ ಆಯ್ಕೆಯಾಗಿದ್ದರು. ಮಂಗಳವಾರಷ್ಟೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಒಟ್ಟಾಗಿ ಪೂಜೆ ಸಲ್ಲಿಸಿದ್ದರು.
Congress leader Siddharamaiah on Wednesday said that he will not retire from politics but will not contest the upcoming elections. Congress Will Win Over 130 Seats, Siddaramaiahs Big Poll Prediction.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am