ಬ್ರೇಕಿಂಗ್ ನ್ಯೂಸ್
12-05-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 12: ಅತಂತ್ರ ಫಲಿತಾಂಶ ಬರಲಿದೆ ಎಂಬ ಸಮೀಕ್ಷೆಗಳ ವರದಿ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಎರಡೂ ಅಧಿಕಾರಕ್ಕೇರಲು ತೆರೆಮರೆಯ ಪ್ರಯತ್ನ ನಡೆಸಿದೆ. ಇದೇ ವೇಳೆ, ಕಾಂಗ್ರೆಸ್ ತನ್ನ ಶಾಸಕರನ್ನು ಹಿಡಿದಿಡಲು ಪ್ಲಾನ್ ಹಾಕ್ಕೊಂಡಿದೆ. ಆಪರೇಶನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು, ತಮ್ಮ ಅಭ್ಯರ್ಥಿಗಳಿಗೆ ಮುನ್ನಡೆ ಪಡೆದು ಗೆಲುವು ಖಾತ್ರಿಯಾಗುತ್ತಲೇ ನೇರವಾಗಿ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ರಾತ್ರಿ ರಾಜ್ಯದ ಎಲ್ಲ ಅಭ್ಯರ್ಥಿಗಳ ಜೊತೆಗೂ ವರ್ಚುವಲ್ ಮೀಟಿಂಗ್ ನಡೆಸಿದ್ದು, ಲೀಡ್ ಪಡೆಯುತ್ತಲೇ ನೇರವಾಗಿ ಬೆಂಗಳೂರಿಗೆ ಬಂದು ಉಳಿದುಕೊಳ್ಳುವಂತೆ ಸಲಹೆ ಮಾಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕೆಲವು ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದಿದ್ದರೆ, ಹೆಚ್ಚಿನವುಗಳಲ್ಲಿ ಅತಂತ್ರ ಫಲಿತಾಂಶ ತೋರಿಸಿದೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಮೂಡಿಬರಲಿದೆ ಎಂದೂ ಹೇಳಿದೆ. ಹೀಗಾಗಿ ಕಾಂಗ್ರೆಸ್ ಕೆಲವು ಸ್ಥಾನಗಳಿಂದ ಮ್ಯಾಜಿಕ್ ನಂಬರಿನಿಂದ ಮಿಸ್ ಹೊಡೆಯುತ್ತಾ ಅನ್ನುವ ಜಿಜ್ಞಾಸೆ ಉಂಟಾಗಿದೆ. ಇಂತಹ ಅನುಮಾನ ಸ್ವತಃ ರಾಜ್ಯ ಕಾಂಗ್ರೆಸ್ ನಾಯಕರಲ್ಲೂ ಇದ್ದು, ಹೊರಗೆ ಬಿಟ್ಟು ಕೊಡದಿದ್ದರೂ ತಮ್ಮ ಶಾಸಕರು ವಿರೋಧಿಗಳಿಗೆ ದಾಳವಾಗದಿರಲಿ ಎಂದು ಆಪರೇಶನ್ ಆಗದಂತೆ ಹಿಡಿದಿಡಲು ಪ್ರಯತ್ನಿಸಿದ್ದಾರೆ.
ಇದೇ ವೇಳೆ, ಬಿಜೆಪಿ ರೀತಿಯಲ್ಲೇ ರಿವರ್ಸ್ ಆಪರೇಶನ್ ಮಾಡೋದಕ್ಕೂ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. 2-3 ಸೀಟು ಕಡಿಮೆಯಾದಲ್ಲಿ ಆಪರೇಶನ್ ಮೂಲಕ ಶಾಸಕರನ್ನು ಖರೀದಿಸುವುದಕ್ಕೂ ತಯಾರಿ ನಡೆಸಿದೆ. ಎರಡು ಪಕ್ಷಗಳೂ ತಮಗೇ ಬಹುಮತ ಎಂದು ಹೇಳಿಕೊಂಡರೂ, ಒಳಗೊಳಗೆ ಅತಂತ್ರದ ಭೀತಿ ಎದುರಿಸುತ್ತಿವೆ.
Before BJP starts operation, come to Bangalore when congress is about to get powers, leaders to MLAs. Revenue Minister and senior BJP leader R Ashoka said that the BJP will start an ‘operation’ with the high command’s guidance, if the party does not win a majority. Speaking to Kannada news channel News First, Ashoka exuded confidence that the BJP will form government, irrespective of whether they win a majority.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm