ಬ್ರೇಕಿಂಗ್ ನ್ಯೂಸ್
12-05-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 12: ಅತಂತ್ರ ಫಲಿತಾಂಶ ಬರಲಿದೆ ಎಂಬ ಸಮೀಕ್ಷೆಗಳ ವರದಿ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಎರಡೂ ಅಧಿಕಾರಕ್ಕೇರಲು ತೆರೆಮರೆಯ ಪ್ರಯತ್ನ ನಡೆಸಿದೆ. ಇದೇ ವೇಳೆ, ಕಾಂಗ್ರೆಸ್ ತನ್ನ ಶಾಸಕರನ್ನು ಹಿಡಿದಿಡಲು ಪ್ಲಾನ್ ಹಾಕ್ಕೊಂಡಿದೆ. ಆಪರೇಶನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ನಾಯಕರು, ತಮ್ಮ ಅಭ್ಯರ್ಥಿಗಳಿಗೆ ಮುನ್ನಡೆ ಪಡೆದು ಗೆಲುವು ಖಾತ್ರಿಯಾಗುತ್ತಲೇ ನೇರವಾಗಿ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ರಾತ್ರಿ ರಾಜ್ಯದ ಎಲ್ಲ ಅಭ್ಯರ್ಥಿಗಳ ಜೊತೆಗೂ ವರ್ಚುವಲ್ ಮೀಟಿಂಗ್ ನಡೆಸಿದ್ದು, ಲೀಡ್ ಪಡೆಯುತ್ತಲೇ ನೇರವಾಗಿ ಬೆಂಗಳೂರಿಗೆ ಬಂದು ಉಳಿದುಕೊಳ್ಳುವಂತೆ ಸಲಹೆ ಮಾಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕೆಲವು ಕಾಂಗ್ರೆಸ್ ಬಹುಮತ ಸಾಧಿಸುತ್ತೆ ಎಂದಿದ್ದರೆ, ಹೆಚ್ಚಿನವುಗಳಲ್ಲಿ ಅತಂತ್ರ ಫಲಿತಾಂಶ ತೋರಿಸಿದೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಮೂಡಿಬರಲಿದೆ ಎಂದೂ ಹೇಳಿದೆ. ಹೀಗಾಗಿ ಕಾಂಗ್ರೆಸ್ ಕೆಲವು ಸ್ಥಾನಗಳಿಂದ ಮ್ಯಾಜಿಕ್ ನಂಬರಿನಿಂದ ಮಿಸ್ ಹೊಡೆಯುತ್ತಾ ಅನ್ನುವ ಜಿಜ್ಞಾಸೆ ಉಂಟಾಗಿದೆ. ಇಂತಹ ಅನುಮಾನ ಸ್ವತಃ ರಾಜ್ಯ ಕಾಂಗ್ರೆಸ್ ನಾಯಕರಲ್ಲೂ ಇದ್ದು, ಹೊರಗೆ ಬಿಟ್ಟು ಕೊಡದಿದ್ದರೂ ತಮ್ಮ ಶಾಸಕರು ವಿರೋಧಿಗಳಿಗೆ ದಾಳವಾಗದಿರಲಿ ಎಂದು ಆಪರೇಶನ್ ಆಗದಂತೆ ಹಿಡಿದಿಡಲು ಪ್ರಯತ್ನಿಸಿದ್ದಾರೆ.
ಇದೇ ವೇಳೆ, ಬಿಜೆಪಿ ರೀತಿಯಲ್ಲೇ ರಿವರ್ಸ್ ಆಪರೇಶನ್ ಮಾಡೋದಕ್ಕೂ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. 2-3 ಸೀಟು ಕಡಿಮೆಯಾದಲ್ಲಿ ಆಪರೇಶನ್ ಮೂಲಕ ಶಾಸಕರನ್ನು ಖರೀದಿಸುವುದಕ್ಕೂ ತಯಾರಿ ನಡೆಸಿದೆ. ಎರಡು ಪಕ್ಷಗಳೂ ತಮಗೇ ಬಹುಮತ ಎಂದು ಹೇಳಿಕೊಂಡರೂ, ಒಳಗೊಳಗೆ ಅತಂತ್ರದ ಭೀತಿ ಎದುರಿಸುತ್ತಿವೆ.
Before BJP starts operation, come to Bangalore when congress is about to get powers, leaders to MLAs. Revenue Minister and senior BJP leader R Ashoka said that the BJP will start an ‘operation’ with the high command’s guidance, if the party does not win a majority. Speaking to Kannada news channel News First, Ashoka exuded confidence that the BJP will form government, irrespective of whether they win a majority.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm