ಬ್ರೇಕಿಂಗ್ ನ್ಯೂಸ್
13-05-23 12:58 pm HK News Desk ಕರ್ನಾಟಕ
ದಾವಣಗೆರೆ, ಮೇ 13 : ಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸೋಲಿನ ಕಹಿ ಅನುಭವಿಸಿದ್ದಾರೆ. 2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಎದುರು ಸೋಲು ಕಂಡಿದ್ದ ಕಾಂಗ್ರೆಸ್ನ ಡಿಜಿ ಶಾಂತನಗೌಡ ಅವರು ಈ ಬಾರಿ ಸೇಡು ತೀರಿಸಿಕೊಂಡಿದ್ದಾರೆ.
ಅಂಚೆ ಮತ ಎಣಿಕೆ ಸಂದರ್ಭದಲ್ಲಿಯೇ ಹಿನ್ನಡೆ ಅನುಭವಿಸಿದ ರೇಣುಕಾಚಾರ್ಯ ಅವರು ಮತ್ತೆ ಚೇತರಿಸಿಕೊಳ್ಳುವುದು ಸಾಧ್ಯವಾಗಲಿಲ್ಲ. ಇವಿಎಂ ಮತಗಳ ಎಣಿಕೆಯಲ್ಲಿಯೂ ಶಾಂತನಗೌಡ ಅವರು ಗಮನಾರ್ಹ ಮುನ್ನಡೆ ಕಾಯ್ದುಕೊಂಡಿದ್ದರು. ಸುಮಾರು 14 ಸಾವಿರ ಮತಗಳ ಅಂತರದಿಂದ ಶಾಂತನಗೌಡ ಮುನ್ನಡೆ ಪಡೆದಿದ್ದಾರೆ.
ಇವಿಎಂ ಮತಗಳ ಆರಂಭಿಕ ಸುತ್ತಿನ ಎಣಿಕೆಯಲ್ಲಿ ಶಾಂತನ ಗೌಡ ಅವರು 5185 ಮತಗಳನ್ನು ಪಡೆದಿದ್ದರೆ, ರೇಣುಕಾಚಾರ್ಯ ಅವರಿಗೆ 3713 ಮತಗಳು ಬಂದಿದ್ದವು.
2018ರ ಚುನಾವಣೆಯಲ್ಲಿ ರೇಣುಕಾಚಾರ್ಯ ಅವರು 80,624 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಆಗ ಶಾಂತನಗೌಡ ಅವರಿಗೆ 76,391 ಮತಗಳು ದೊರಕಿದ್ದವು. 4233 ಮತಗಳ ಅಂತರದಿಂದ ಶಾಂತನಗೌಡ ಸೋಲು ಅನುಭವಿಸಿದ್ದರು. 2013ರ ಚುನಾವಣೆಯಲ್ಲಿ ಶಾಂತನಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಆಗ ಹೊನ್ನಾಳಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಎಂಪಿ ರೇಣುಕಾಚಾರ್ಯ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಹೊರಗೆ ಬಂದಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೆಜೆಪಿ ಸ್ಥಾಪಿಸಿದ್ದರು. ಅವರ ಜತೆ ಕೆಜೆಪಿ ಸೇರ್ಪಡೆಯಾಗಿದ್ದ ರೇಣುಕಾಚಾರ್ಯ, ಈ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರು.
Honnali Election Result 2023 LIVE, M P Renukacharya defeated against D G Shantana Gowda.
25-08-25 10:37 am
HK News Desk
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm