ಬ್ರೇಕಿಂಗ್ ನ್ಯೂಸ್
14-05-23 01:21 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ತೀವ್ರ ರೋಚಕ ಫಲಿತಾಂಶಕ್ಕೆ ಕಾರಣವಾದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ.
ಮೊದಲ ಬಾರಿಗೆ ಮತ ಎಣಿಕೆ ನಡೆದಾಗ 160 ಮತಗಳಿಂದ ಗೆದ್ದಿರುವುದಾಗಿ ಘೋಷಿಸಲಾಗಿತ್ತು. ಆದರೆ ತದನಂತರ ಸಂಸದ ತೇಜಸ್ವಿ ಸೂರ್ಯ, ಆರ್. ಅಶೋಕ್ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಿ ಅಕ್ರಮ ನಡೆಸಿದ್ದು, ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ ಕ್ಷೇತ್ರದಲ್ಲಿ ಮತ ಎಣಿಕೆಯು ಮೊದಲ ಸುತ್ತಿನಿಂದಲೂ ಹಾವು-ಏಣಿಯಾಟ ನಡೆಯುತ್ತಲೇ ಇತ್ತು. 16 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ ಬಳಿಕ ಕಾಂಗ್ರೆಸ್ನ ಸೌಮ್ಯಾರೆಡ್ಡಿ 294 ಮತಗಳಿಂದ ಮುನ್ನಡೆ ಸಾಧಿಸಿರುವುದನ್ನು ಚುನಾವಣಾ ಫಲಿತಾಂಶದ ವೆಬ್ಸೈಟ್ನಲ್ಲಿ ಪ್ರಕಟಿಸಲಾಯಿತು.ನಂತರ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿದರು.
ಒಟ್ಟು ಮೂರು ಬಾರಿ ಮರು ಎಣಿಕೆ ಮಾಡಲಾಯಿತು. ನಾಲ್ಕು ಬಾರಿ ಮತ್ತೆ ಮತ್ತೆ ಎಣಿಸಿದರೂ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದರು.
ಇನ್ನು, ಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು ಎಂದು ಅಂತಿಮವಾಗಿ ಅಧಿಕೃತ ಘೋಷಣೆಯಾಗುತ್ತಿದ್ದಂತೆ ಮೊದಲ ಬಾರಿ ಮತ ಎಣಿಕೆಯಲ್ಲಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಮತ ಕೇಂದ್ರದ ಬಳಿ ಕಣ್ಣೀರು ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಇಂದು ಭಾನುವಾರವೇ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಸೌಮ್ಯಾರೆಡ್ಡಿ ಘೋಷಿಸಿದರು. ಈ ಇಡೀ ಪ್ರಹಸನಕ್ಕೆ ಜಯನಗರದ ಪಕ್ಕದ ಅಸೆಂಬ್ಲಿ ಕ್ಷೇತ್ರ ಬಿಟಿಎಂ ಲೇಔಟಿನಿಂದ 8ನೇ ಬಾರಿಗೆ ಸತತವಾಗಿ ಗೆಲುವು ಸಾಧಿಸಿದ ಸೌಮ್ಯಾ ರಡ್ಡಿ ಅವರ ಅಪ್ಪ ರಾಮಲಿಂಗಾರೆಡ್ಡಿ ಸಾಕ್ಷಿಯಾದರು.
ಮೊದಲ ಬಾರಿ ಮತ ಎಣಿಕೆಯಲ್ಲಿ ನನಗೆ ಗೆಲುವಾಗಿತ್ತು. ತೇಜಸ್ವಿ ಸೂರ್ಯ, ಅಶೋಕ್ ಅಕ್ರಮವಾಗಿ ಮತ ಎಣಿಕೆ ಕೊಠಡಿಗೆ ಎಂಟ್ರಿ ಕೊಟ್ಟಿದ್ದರು. ಅಕ್ರಮವಾಗಿ ಬಂದು ಬಿಜೆಪಿ ಅಭ್ಯರ್ಥಿ ಗೆಲ್ಲುವಂತೆ ಮಾಡಿದ್ದಾರೆಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಜಯನಗರ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ.
ಜಯನಗರ ಅಸೆಂಬ್ಲಿ ಕ್ಷೇತ್ರದಲ್ಲಿ ಒಟ್ಟು 2,09,942 ಮತದಾರರು ಇದ್ದರು. 105582 ಮಂದಿ ಪುರುಷರು, 1,04,345 ಮಹಿಳೆಯರು ಇದ್ದಾರೆ. ಕಣದಲ್ಲಿ 15 ಮಂದಿ ಅಭ್ಯರ್ಥಿಗಳು ಇದ್ದರು. ಶೇ. 53.72ರಷ್ಟು ಮತದಾನವಾಗಿತ್ತು.
BJP 16 Vote Victory in Jayanagar Seat After Late Night Counting Drama, Ramamurthy defeats Congress Sowmya Reddy, will fight leagally says sowmya. According to the EC website, Congress's Sowmya Reddy got 57,781 votes (47.85 per cent vote share) and C K Ramamurthy secured 57,797 votes.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
04-08-25 01:24 pm
Mangalore Correspondent
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm