ಬ್ರೇಕಿಂಗ್ ನ್ಯೂಸ್
15-05-23 02:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಬಹುತೇಕ ಅಂತಿಮ ಮುದ್ರೆ ಹಾಕಲು ಹೈಕಮಾಂಡ್ ಮುಂದಾಗಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಮನವೊಲಿಸಿದ್ದು, ಐದು ವರ್ಷಗಳ ಮುಖ್ಯಮಂತ್ರಿ ಹುದ್ದೆಯನ್ನು ಎರಡು ಅವಧಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲ ಎರಡು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ.
ಎರಡು ವರ್ಷಗಳ ನಂತರ ಡಿಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಆದರೆ ಮೊದಲ ಅವಧಿಯಲ್ಲಿ ಡಿಕೆಶಿ ತಾನೊಬ್ಬನೇ ಉಪ ಮುಖ್ಯಮಂತ್ರಿ ಆಗಬೇಕು, ಜೊತೆಗೆ ಗೃಹ ಸಚಿವ ಸ್ಥಾನ ನೀಡಬೇಕೆಂದು ಶರತ್ತು ಹಾಕಿದ್ದಾರೆ ಎನ್ನಲಾಗುತ್ತಿದೆ. ಶಾಸಕಾಂಗ ಸಭೆಯಲ್ಲಿ ಬಹುತೇಕ ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಒಲವು ತೋರಿದ್ದರು.
ರಾಜ್ಯದಲ್ಲಿ ಪ್ರಬಲವಾಗಿರುವ ಕುರುಬ ಸಮುದಾಯಕ್ಕೆ ಸೇರಿರುವ ಸಿದ್ದರಾಮಯ್ಯ ಅವರನ್ನು ಒಂದು ಅವಧಿಗೆ ಮುಖ್ಯಮಂತ್ರಿಯಾಗಿಸಿ ನಿವೃತ್ತಿಯಾಗಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಎಐಸಿಸಿ ವೀಕ್ಷಕರಾಗಿ ಬಂದಿರುವ ಮಹಾರಾಷ್ಟ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ, ಜಿತೇಂದರ್ ಸಿಂಗ್, ದೀಪಕ್ ಬಬರಿಯಾ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರಿಗೆ ವರದಿ ನೀಡಿದ್ದಾರೆ.
ಎಐಸಿಸಿ ಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಣದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಮತ್ತಿತರರು ಚರ್ಚೆ ನಡೆಸಿ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ.
Siddaramaiah presented a power sharing formula and said he wanted to be the chief minister for two yeara, DK Shivakumar agrees says sources.The party high command is facing a dilemma on how to accomodate Siddaramaiah if DK Shivakumar is chosen as the Congress Legislature Party (CLP) leader, sources said.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
04-08-25 12:40 pm
Udupi Correspondent
New Witness, Dharmasthala Case, Jayan: ನನ್ನ ಕ...
02-08-25 10:51 pm
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm