ಬ್ರೇಕಿಂಗ್ ನ್ಯೂಸ್
17-05-23 04:09 pm HK News Desk ಕರ್ನಾಟಕ
ಚಾಮರಾಜನಗರ, ಮೇ 17: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಕಾರ್ಯಕರ್ತರ ಕೃತಜ್ಞತಾ ಸಭೆ ನಡೆಸಿದರು.
ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೀರಿ ಎಂದು ಕಿಡಿಕಾರಿದರು.
ಕೆಲ ಲೋಫರ್ ನನ್ ಮಕ್ಕಳು ಈ ಪಾಪದ ಕೆಲಸ ಮಾಡಿದ್ದಾರೆ. 7-8 ಮಂದಿಯಿಂದ ಈ ಸೋಲುಂಟಾಯಿತು, ನನ್ನ ಸಮಾಜದವರೇ ನನಗೆ ಕೈ ಕೊಟ್ಟರು. ಯಾರ್ಯಾರೋ ಬೋರ್ಡ್ ಅಧ್ಯಕ್ಷರು ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು ಎಂದು ಬಿಜೆಪಿ ಮುಖಂಡರ ವಿರುದ್ಧ ಆರೋಪ ಮಾಡಿದರು.
ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ, ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು, ಆಗ ಮಾಡಲಿಲ್ಲ- ಈಗ ಮಾಡಿ ಎನ್ನುತ್ತಿದ್ದೀರಿ, ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು. ಮಾದೇಶ್ವರನ ಅಣೆ, ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ. ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಮಾತು ಮುಂದುವರಿಸಿದ ಅವರು, ಪಕ್ಷ ತಾಯಿಗೆ ಸಮಾನ ಪಕ್ಷ ದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದರು.
ಕೆಲವರು ಮನಸ್ಸು ಬಿಚ್ಚಿ ಮುಕ್ತ ಮನಸ್ಸಿನಿಂದ ಕೆಲಸ ಮಾಡಲಿಲ್ಲ. ದೊಡ್ಡ ಸ್ಥಾನಕ್ಕೆ ಸೋಮಣ್ಣ ಹೋಗುತ್ತಾರೆ ಎಂದಿದ್ದೆ ಮುಳುವಾಯಿತು ಎಂದು ಪಕ್ಷದ ಕೆಲ ಮುಖಂಡರ ವಿರುದ್ಧ ಬೇಸರ ವ್ಯಕ್ತಪಡಿಸಿದರು.
Somanna says some inside BJP are responsible for me to loose in Varuna, should thrash them with slippers, somanna goes out of control in Chamrajnagar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm