ಬ್ರೇಕಿಂಗ್ ನ್ಯೂಸ್
18-05-23 07:17 pm HK News Desk ಕರ್ನಾಟಕ
ರಾಮನಗರ, ಮೇ 18: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಚನ್ನಪಟ್ಟಣದಲ್ಲಿ ಕೃತಜ್ಞತಾ ಸಭೆ ಏರ್ಪಡಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು.
ಈಗಿನ ಸರ್ಕಾರದ ನಾಟಕ ನೋಡುತ್ತಿದ್ದೀರಿ. ಈ ಸರ್ಕಾರದಿಂದ ಒಳ್ಳೆ ಆಡಳತದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಾನು ಸ್ವಾಭಿಮಾನ ಕಳೆದುಕೊಂಡು ಮಂತ್ರಿಗಳ ಮುಂದೆ ನಿಲ್ಲಲು ಆಗಲ್ಲ. ನಿಮ್ಮ ಸ್ವಾಭಿಮಾನಕ್ಕೆ ದಕ್ಕೆ ಆಗೋ ರೀತಿ ನಡೆದುಕೊಳ್ಳಲು ನಾನು ತಯಾರಿಲ್ಲ. ಅಭಿವೃದ್ಧಿ ಹಣ ತರುತ್ತಿದೆ, ಆದ್ರೆ ಈ ಸರ್ಕಾರದಲ್ಲಿ ಹಣ ತಂದು ಅಭಿವೃದ್ಧಿ ಮಾಡ್ತಾರೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಪಾರ್ಲಿಮೆಂಟ್ ಚುನಾವಣೆ ಬಳಿಕ ಏನು ಡವಲಪ್ಮೆಂಟ್ ಆಗುತ್ತೊ ನೋಡೋಣ ಎಂದರು.
ಅಲ್ಲದೆ, ಮುಂದೆ ತಾ.ಪಂ, ಜಿಪಂ ಚುನಾವಣೆ ಬರುತ್ತೆ. ನನ್ನನ್ನು ಗೆಲ್ಲಿಸಿದಂತೆ ಎಲ್ಲಾ ಸ್ಥಾನಗಳನ್ನು ಗೆಲ್ಲುವಂತೆ ಹೋರಾಡ ಮಾಡೋಣ.ನಾನು ನಿಮ್ಮ ಜೊತೆ ಇರ್ತೇನೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ, ಹೊಸ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ಹೇಳಿದರು.
ಕಾರ್ಯಕರ್ತರಿಗೆ ಧನ್ಯವಾದ;
ಚನ್ನಪಟ್ಟಣದ ನನ್ನ ಕಾರ್ಯಕರ್ತರು, ಯಾರ ಆಮೀಷಕ್ಕೂ ಒಳಗಾಗದೆ ಜನ ನನ್ನ ಕೈ ಹಿಡಿದಿದ್ದಾರೆ. ಹಲವಾರು ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ. ಇದರಿಂದ ಪಕ್ಷದ ಕಾರ್ಯಕರ್ತರು ದೃತಿಗೆಡುವ ಅಗತ್ಯ ಇಲ್ಲ. ಈ ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಈ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರ ಜೊತೆಗೆ ದೇವರ ಅನುಗ್ರಹ ಇದೆ. ಫಲಿತಾಂಶದಿಂದ ಹಲವರಿಗೆ ಗೊಂದಲ ಆತಂಕ ಇದೆ. ಹಲವಾರು ಜನ ದೂರವಾಣಿ ಮೂಲ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು. ಇನ್ನು 15 ದಿನಗಳಲ್ಲಿ ಪ್ರತಿ ಗ್ರಾಮಗಳಿಗೆ ಬೇಟಿ ನೀಡಲಿದ್ದೇನೆ ಎಂದರು.
Congress will change by October or November, need to check how money will be arranged to manage what is promised slams HD Kumaraswamy.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm