ಬ್ರೇಕಿಂಗ್ ನ್ಯೂಸ್
19-05-23 07:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬಹುದೊಡ್ಡ ಜನಾಶೀರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಎಲ್ಲಾ ಜನತೆಗೆ, ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನೀವು ಬಯಸಿದ ಸರ್ಕಾರ. ಜನರ ಧ್ವನಿ ರಾಜ್ಯ ಸರ್ಕಾರದ ಧ್ವನಿಯಾಗಲಿದೆ ಎಂದರು.
ನಾವು ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಈ ಸರ್ಕಾರ ನಾಳೆ ರಚನೆ ಆಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಎಲ್ಲಾ ನಾಯಕರು ಆಗಮಿಸುತ್ತಿದ್ದಾರೆ. ರಾಷ್ಟ್ರದ ಅನೇಕ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಆಗಮಿಸುವರು 11 ಗಂಟೆ ಒಳಗಾಗಿ ಆಗಮಿಸಬೇಕು. ತಡವಾಗಿ ಬಂದರೆ ಗಣ್ಯರ ಭೇಟಿ ಹಿನ್ನೆಲೆಯಲ್ಲಿ ರಸ್ತೆ ನಿರ್ಬಂಧ ಮಾಡಲಾಗಿರುತ್ತದೆ ಎಂದು ಸೂಚಿಸಿದರು.
ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ;
ಈ ನೂತನ ಸರ್ಕಾರ ರಚನೆ ಕಾರ್ಯಕ್ರಮ, ಪಕ್ಷಾತೀತ ಕಾರ್ಯಕ್ರಮ. ಹಾಗಾಗಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ ನೀಡುತ್ತೇವೆ. ನೀವು ಅನ್ಯತಾ ಭಾವಿಸದೆ, ನೀವು ಜನಪ್ರತಿನಿಧಿಗಳಾಗಿದ್ದೀರಿ. ನೀವು ಸರ್ಕಾರದ ಭಾಗ. ಹೀಗಾಗಿ ನೀವು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು
On first day of cabinet Dk Shivakumar to designate big plan, invites JDS and BJP members for CM swearing ceremony.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
16-02-26 09:33 am
Mangaluru Staffer
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am