ಬ್ರೇಕಿಂಗ್ ನ್ಯೂಸ್
19-05-23 10:10 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ಮುಹೂರ್ತ ನಿಗದಿಯಾಗಿದ್ದು, ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಜೊತೆಗೆ, ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿ ಎಂಬುದು ಖಾತ್ರಿಯಾಗಿದೆ. ಹೊಸ ಸರ್ಕಾರದಲ್ಲಿ ಯಾರೆಲ್ಲ ಸಚಿವರಾಗುತ್ತಾರೆ ಎಂಬ ಕುತೂಹಲ ಉಂಟಾಗಿದೆ. ಈಗಾಗಲೇ ಸಚಿವ ಸ್ಥಾನಕ್ಕೆ ಸಂಭ್ಯಾವರ ಪಟ್ಟಿಯನ್ನು ಕಾಂಗ್ರೆಸ್ ಸಿದ್ಧಪಡಿಸಿದೆ. ಮೊದಲ ದಿನವೇ ಪೂರ್ಣ ಪ್ರಮಾಣದ ಸರ್ಕಾರ ತರಲು ಚಿಂತನೆ ನಡೆದಿದೆ. ಇದಕ್ಕಾಗಿ 32 ಮಂದಿಯ ಹೆಸರುಗಳನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ರವಾನೆ ಮಾಡಲಾಗಿದೆ.
ಸಂಭಾವ್ಯರ ಪಟ್ಟಿಯಲ್ಲಿ ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ/ರೂಪಕಲಾ ಶಶಿಧರ್, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ, ರಾಮಲಿಂಗಾ ರೆಡ್ಡಿ, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್, ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಯು.ಟಿ.ಖಾದರ್/ ಸಲೀಂ ಅಹ್ಮದ್, ಜಮೀರ್ ಅಹ್ಮದ್ ಖಾನ್/ ಎನ್.ಎ. ಹ್ಯಾರೀಸ್, ಸತೀಶ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಶರಣ ಪ್ರಕಾಶ ಪಾಟೀಲ ಹೆಸರಿದೆ.

ಅಜಯ್ ಧರ್ಮ ಸಿಂಗ್, ದಿನೇಶ್ ಗುಂಡೂರಾವ್, ಲಕ್ಷ್ಮಣ ಸವದಿ, ಲಕ್ಷ್ಮಿ ಹೆಬ್ಬಾಳಕರ, ಮಧು ಬಂಗಾರಪ್ಪ, ಬಸವರಾಜ ರಾಯರಡ್ಡಿ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ವಿಜಯಾನಂದ ಕಾಶಪ್ಪನವರ, ವಿನಯ್ ಕುಲಕರ್ಣಿ, ಟಿ.ಡಿ.ರಾಜೇಗೌಡ/ ಕೆ.ಎಂ.ಶಿವಲಿಂಗೇಗೌಡ, ಬಿ.ಕೆ. ಸಂಗಮೇಶ್ವರ, ಆರ್.ಬಿ. ತಿಮ್ಮಾಪುರ, ಕೊತ್ತೂರು ಮಂಜುನಾಥ್, ಶ್ಯಾಮನೂರು ಶಿವಶಂಕರಪ್ಪ/ ಎಸ್.ಎಸ್.ಮಲ್ಲಿಕಾರ್ಜುನ, ಎಂ.ಕೃಷ್ಣಪ್ಪ/ ಪ್ರಿಯಕೃಷ್ಣ ಹೆಸರು ಇದೆ ಎನ್ನುವ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.


ಡಿಕೆ ಶಿವಕುಮಾರ್ ಆಪ್ತರಿಗೆ ಸಚಿವ ಸಂಪುಟದಲ್ಲಿ 20 ಸ್ಥಾನ ಹಾಗೂ ಇದರ ಜೊತೆಗೆ ಜಲಸಂಪನ್ಮೂಲ ಮತ್ತು ಇಂಧನ ಎರಡು ಪ್ರಮುಖ ಖಾತೆಗಳನ್ನು ಪಡೆಯುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 13 ಸಚಿವ ಸ್ಥಾನ ಬಿಟ್ಟು ಕೊಡಲಾಗುತ್ತದೆ ಎಂದು ತಿಳಿದುಬಂದಿದೆ.


ಅಲ್ಪಸಂಖ್ಯಾತರಲ್ಲಿ ಶಿವಕುಮಾರ್ ಈಗಾಗಲೇ ಹಿರಿಯ ನಾಯಕರಾದ ಯು.ಟಿ ಖಾದರ್ ಮತ್ತು ತನ್ವೀರ್ ಸೇಠ್ ಅವರನ್ನು ಸಚಿವ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಹೊರಗಿಡಬೇಕೆಂದು ಒತ್ತಾಯಿಸಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗ ಜಮೀರ್ ಖಾನ್ ತನ್ನನ್ನು ದೂರ ಇಡುವ ನಿರ್ಧಾರವನ್ನು ಹೇಗೆ ಎದುರಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
32 along with BK Hariprasad, UT khader, Parameshwar to be inside the cabinet of Siddaramaiah.B. Z. Zameer Ahmed Khan out for now.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm