ಸಿದ್ದರಾಮಯ್ಯ ಸರ್ಕಾರದ ಹೊಸ ಆದೇಶ ; ಕರ್ನಾಟಕ ಡಿಜಿ ಐಜಿಪಿಯಾಗಿ ಅಲೋಕ್ ಮೋಹನ್ ನೇಮಕ 

21-05-23 12:29 pm       Bangalore Correspondent   ಕರ್ನಾಟಕ

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಬೆಂಗಳೂರು, ಮೇ 21: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ನೇಮಕ ಮಾಡಲಾಗಿದೆ.

ಅಲೋಕ್ ಮೋಹನ್ 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ. 36 ವರ್ಷಗಳ ಕಾಲ ಇಲಾಖೆಯ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 2025ರ ಏಪ್ರಿಲ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.ಸೇವೆಯ ಹಿರಿತನದ ಆಧಾರದ ಮೇಲೆ ಅವರು ಈ ಉನ್ನತ ಹುದ್ದೆಗೆ ಮೊದಲ ಆಯ್ಕೆಯಾಗಿದ್ದರು.

Karnataka DGP Praveen Sood appointed as CBI director: All you need to know  | India News - Times of India

ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಪ್ರವೀಣ್ ಸೂದ್ ಐಐಟಿ ದೆಹಲಿಯಲ್ಲಿ ಪದವಿ ಪಡೆದವರು, 1986ರಲ್ಲಿ ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಅವರು, . 1989 ರಲ್ಲಿ ಮೈಸೂರು ಪೊಲೀಸ್ ಅಧೀಕ್ಷಕರಾಗಿ ನೇಮಕವಾದರು. ನಂತರ ಬೆಂಗಳೂರು ನಗರಕ್ಕೆ ಕಾನೂನು ಮತ್ತು ಸುವ್ಯವಸ್ಥೆ, ಉಪ ಪೊಲೀಸ್ ಆಯುಕ್ತರಾಗಿ, ಬಳ್ಳಾರಿ ಮತ್ತು ರಾಯಚೂರು ಪೊಲೀಸ್ ಅಧೀಕ್ಷಕರಾಗಿ, ಮಾರಿಷಸ್ ಸರ್ಕಾರದ ಪೊಲೀಸ್ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.

Senior IPS officer Dr Alok Mohan has been appointed as new DG&IGP of Karnataka. On May 20, Siddaramaiah took oath as the chief minister of Kaarnatak and DK Shivkumar sworn-in as deputy chief minister of the state.