ಬ್ರೇಕಿಂಗ್ ನ್ಯೂಸ್
22-05-23 05:47 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22 : 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಸೇರಿ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸೋಮವಾರದಿಂದ ಬುಧವಾರದವರೆಗೆ (ಮೇ 22ರಿಂದ ಮೇ 24) ವಿಧಾನಸಭೆ ಅಧಿವೇಶನ ನಡೆಯಲಿದ್ದು, ಇಂದು ಬೆಳಗ್ಗೆ 11.15ರ ಹೊತ್ತಿಗೆ ಅಧಿವೇಶನ ಆರಂಭವಾಗಿದೆ.
ಮೊದಲ ಎರಡು ದಿನಗಳ ಕಾಲ ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಮೂರನೇ ದಿನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ.

ಶಾಸಕರಿಗೆ ಪ್ರಮಾಣವಚನ ಬೋಧಿಸುವ ಜವಾಬ್ದಾರಿಯನ್ನು ಹಿರಿಯ ಶಾಸಕ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು ವಹಿಸಿಕೊಂಡಿದ್ದಾರೆ. ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ.
ಈ ನಡುವೆ, ಶಾಸಕರಿಗೆ ಪ್ರಮಾಣವಚನ ಬೋಧಿಸುವ ಹಂಗಾಮಿ ಸ್ಪೀಕರ್ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಇದು ರಾಜಭವನದಲ್ಲಿ ನಡೆಯುವ ಪ್ರಕ್ರಿಯೆಯಾಗಿದೆ. ಅದಾದ ಬಳಿಕ ವಿಧಾನಸಭೆಯಲ್ಲಿ ಶಾಸಕರಿಗೆ ಪ್ರಮಾಣವಚನ ಬೋಧನೆ ಆರಂಭಗೊಂಡಿತು

ಇದರಂತೆ ಹಂಗಾಮಿ ಸ್ಪೀಕರ್ ದೇಶಪಾಂಡೆಯವರು ಎಲ್ಲಾ ಶಾಸಕರಿಗೆ ಪ್ರತ್ಯೇಕವಾಗಿ ಪ್ರಮಾಣ ವಚನ ಬೋಧನೆ ನಡೆಸುತ್ತಿದ್ದಾರೆ. ಮೊದಲಿಗೆ ಶಾಸಕರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಸಿದರು. ಇನ್ನು ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್ ಅವರು, ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜೊತೆ ಸಚಿವರಾಗಿರುವ ಡಾ. ಜಿ. ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಪ್ರಮಾಣವಚನ ಸ್ವೀಕರಿಸಿದರು.

ಕೊರಟಗೆರೆ ಕ್ಷೇತ್ರದ ಶಾಸಕರಾಗಿ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ದೇವನಹಳ್ಳಿ ಶಾಸಕರಾಗಿ ಕೆ.ಹೆಚ್.ಮುನಿಯಪ್ಪ, ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕರಾಗಿ ಎಂ.ಬಿ.ಪಾಟೀಲ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ನಡುವೆ ಅಧಿವೇಶನಕ್ಕೆ 7 ಸಚಿವರ ಪೈಕಿ ರಾಮಲಿಂಗಾರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಗೈರಾಗಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಯಮಕನಮರಡಿ ಶಾಸಕರಾಗಿ ಸತೀಶ್ ಜಾರಕಿಹೊಳಿ, ಚಿತ್ತಾಪುರ ಶಾಸಕರಾಗಿ ಪ್ರಿಯಾಂಕ್ ಖರ್ಗೆ, ಬಿಟಿಎಂ ಲೇಔಟ್ ಶಾಸಕರಾಗಿ ರಾಮಲಿಂಗಾರೆಡ್ಡಿ, ಮಂಗಳೂರು ಶಾಸಕರಾಗಿ ಯು.ಟಿ.ಖಾದರ್, ಬಸವನಬಾಗೇವಾಡಿ ಶಾಸಕರಾಗಿ ಶಿವಾನಂದ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.
The first session of the 16th Karnataka Legislative Assembly began on Monday with 16 new Congress MLAs, including Chief Minister Siddaramaiah, Deputy Chief Minister D K Shivakumar, taking oath on Monday in Bengaluru. The ceremony is being conducted by senior legislator Congress’ R V Deshpande as the Protem Speaker.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm