ಬ್ರೇಕಿಂಗ್ ನ್ಯೂಸ್
22-05-23 10:47 pm HK News Desk ಕರ್ನಾಟಕ
ಕಲಬುರಗಿ, ಮೇ 22 : ನೂತನ ಸಂಸತ್ ಭವನ ರಾಷ್ಟ್ರದ ಪ್ರಥಮ ಪ್ರಜೆಯಿಂದಲೇ ಉದ್ಘಾಟನೆ ಆಗಬೇಕು. ಎಲ್ಲವನ್ನೂ ಮೋದಿಯೇ ಏಕೆ ಮಾಡಬೇಕು ಎಂದು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಅಡಿಗಲ್ಲು ಹಾಕಲೂ ಮೋದಿನೇ, ಉದ್ಘಾಟನೆಗೂ ಮೋದಿನೇ, ಸಿಂಹ ಅಳವಡಿಕೆಗೂ ಮೋದಿನೇ ಬೇಕಾ ? ಎಂದು ಪರೋಕ್ಷವಾಗಿ ಸಂಸತ್ ಭವನದ ಉದ್ಘಾಟನೆಗೆ ಹೊರಟಿರುವ ಮೋದಿಯನ್ನು ಖರ್ಗೆ ಟೀಕಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ರೈಲು ಬಿಟ್ರಿ.. ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ಅವರಿಗೆ ಕೊಡಬಾರದಾ ? ಹಿಂದುಳಿದವರಿಗೆ ರಾಷ್ಟ್ರಪತಿ ಮಾಡಿದ್ದೀವಿ ಅಂತೀರಿ.. ಆದ್ರೆ ಇಂತದ್ದಕ್ಕೆಲ್ಲಾ ನೀವೆ ಮುಂದಾಗ್ತಿರಿ. ಇದು ರಾಷ್ಟ್ರದ ಪ್ರತಿಷ್ಠೆಯ ಪ್ರಶ್ನೆ. ಯಾಕೆ ರಾಷ್ಟ್ರಪತಿ ಅವರಿಗೆ ಕರೆಸ್ತಿಲ್ಲ. ಮೋದಿ ಎಲ್ಲಾನೂ ತಾನೇ ಅಂತಾನೆ.. ಬರೀ ತೋರಿಸಲಿಕ್ಕೆ ಹಿಂದುಳಿದವರನ್ನು ರಾಷ್ಟ್ರಪತಿ ಮಾಡಿದ್ರೆ ಏನ್ ಉಪಯೋಗ ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಸದ್ಯದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಕಲ್ಯಾಣ ಕರ್ನಾಟಕಕ್ಕೆ ಇನ್ನೂ ನಾಲ್ಕೈದು ಮಂತ್ರಿ ಸ್ಥಾನ ಸಿಗಲಿವೆ. ಕಲ್ಯಾಣ ಕರ್ನಾಟಕಕ್ಕೆ ನಾಲ್ಕೈದು ಸ್ಥಾನ, ಮುಂಬೈ ಕರ್ನಾಟಕಕ್ಕೆ ನಾಲ್ಕೈದು ಸ್ಥಾನ ಸಿಗಲಿವೆ ಎಂದು ಈ ಕುರಿತ ಪ್ರಶ್ನೆಗೆ ಖರ್ಗೆ ಉತ್ತರಿಸಿದ್ದಾರೆ.
ವಿಧಾನಸಭಾ ಚುನಾವಣೆಯೇ ಬೇರೆ, ಲೋಕಸಭಾ ಚುನಾವಣೆಯೇ ಬೇರೆ. ಆದ್ರೂ ರಾಜ್ಯದ ಜನರ ಈ ತೀರ್ಮಾನ ನೋಡಿದ್ರೆ ರಾಜ್ಯದಲ್ಲಿ ಎಂ.ಪಿ ಚುನಾವಣೆಯಲ್ಲೂ ನಮಗೆ ಬಹುಮತ ಬರುತ್ತೆ. ದೇಶಾದ್ಯಂತ ಬಹುಮತ ಪಡೆಯುವ ದಿಕ್ಕಿನಲ್ಲಿ ಪ್ರಯತ್ನ ನಡೆಯುತ್ತಿದೆ. ದೆಹಲಿಯ ನನ್ನ ನಿವಾಸದಲ್ಲಿ ಪ್ರತಿಪಕ್ಷಗಳ ಸಂಘಟನೆಗಾಗಿ ಸಭೆ ಕರೆದಿದ್ದೇನೆ. ಸಮಾನ ಮನಸ್ಕರನ್ನ ಕರೆಸಿ ಮಾತನಾಡುತ್ತೇವೆ. ಶುಭ ಸೂಚನೆ ಇದೆ, ಅಪೋಜಿಸನ್ ಗೆ ಯಶಸ್ಸು ಸಿಗುತ್ತೇ ಎನ್ನುವ ನಂಬಿಕೆ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Congress chief Mallikarjun Kharge on Monday targeted Centre for not inviting President Droupadi Murmu for the inauguration of the new Parliament building and accused the Prime Minister Narendra Modi-led government of electing the President of India from the Dalit and the Tribal communities for electoral reasons.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm