ಬ್ರೇಕಿಂಗ್ ನ್ಯೂಸ್
25-05-23 05:08 pm HK News Desk ಕರ್ನಾಟಕ
ಮೈಸೂರು, ಮೇ, 25: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಜೂನ್ನಿಂದಲೇ ಪ್ರತಿಭಟನೆ ನಡೆಸುತ್ತೇನೆ ಎಂದು ಸಂಸದ ಪ್ರತಾಪ್ಸಿಂಹ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಮಣಿಪಾಲ ಆಸ್ಪತ್ರೆ ಬಳಿ ಇರುವ ಜಂಕ್ಷನ್ ಪರಿಶೀಲಿಸಿ ಮಾತನಾಡಿದ ಅವರು, ಜನರು ಜೂನ್ ತಿಂಗಳ ನಂತರ ವಿದ್ಯುತ್ ಬಿಲ್ ಕಟ್ಟಬಾರದು. ಅಲ್ಲದೆ, ಮನೆಯ ಪ್ರತಿ ಯಜಮಾನಿಗೆ 2 ಸಾವಿರ ರೂಪಾಯಿ ಕೊಡಬೇಕು. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ಗಳನ್ನು ನೀಡಬೇಕು. ಇಲ್ಲದಿದ್ದರೆ ಜೂನ್ ತಿಂಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು.
ನಾನು ಮೈಸೂರು, ಕೊಡಗು ಜಿಲ್ಲೆಗಳ ಅಭಿವೃದ್ಧಿಗಾಗಿ ಯಾರ ಹತ್ತಿರ ಬೇಕಾದರೂ ಹೋಗುವೆ. ಮೈಸೂರು ಕೊಡಗಿಗೆ ಒಳ್ಳೆಯದು ಆಗಬೇಕೆಂಬುದು ಅಷ್ಟೇ ನನ್ನ ಉದ್ದೇಶವಾಗಿದೆ. ಬೇಡಿಯಾದರೂ ಅನುದಾನ ತರುವೆ. ನಾನೊಬ್ಬ ಸೇವಕ, ಆದ್ದರಿಂದ ಜಿಲ್ಲೆಯ ಜನರಿಗೋಸ್ಕರ ಅಂಗಲಾಚುವೆ. ಸಿದ್ದರಾಮಯ್ಯ ಅವರಿಗೆ ಮೈಸೂರಿನ ಬಗ್ಗೆ ಪ್ರೀತಿಯಿದೆ. ರಾಜಕೀಯ ಚುನಾವಣೆಗಷ್ಟೆ. ಉಳಿದ ದಿನ ಅಭಿವೃದ್ಧಿ ಕೆಲಸ ಮಾಡಲು ನಾನು ಬಯಸುತ್ತೇನೆ, ಸಹಕಾರ ಕೊಟ್ಟರೆ ಅಭಿವೃದ್ಧಿ, ಇಲ್ಲದಿದ್ದರೆ ಹೋರಾಟ ಮಾಡುವೆ ಎಂದರು.
ಪೊಲೀಸರಿಗೆ ದಮ್ಕಿ ಹಾಕಬೇಡಿ ;
ಇವತ್ತು ಸರ್ಕಾರ ಐದು ವರ್ಷ ಇರುತ್ತದೆ. ಮತ್ತೊಮ್ಮೆ ಬದಲಿಗೆ ಸರ್ಕಾರ ಬರುತ್ತದೆ. ಆದರೆ, ಪೊಲೀಸ್ ವ್ಯವಸ್ಥೆ ಯಾವತ್ತಿದ್ದರೂ ಒಂದೇ ರೀತಿ ಇರುತ್ತದೆ. ಪೊಲೀಸ್ ವ್ಯವಸ್ಥೆಗೆ ಧಮ್ಕಿ ಹಾಕಬೇಡಿ. ಹಾಗೆಯೆ ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ್ ನಾರಾಯಣ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಬಾಯಿ ತಪ್ಪಿನಿಂದ ಆಗಿದ್ದು, ಹಾಗಂತ ಈಗ ಎಫ್ಐಆರ್ ಯಾಕೆ? ಹಾಕಲಾಗಿದೆ ಎಂದು ಪ್ರಶ್ನಿಸಿದರು.
Mysuru MP Prathap Simha warns of protest if congress doesn't fulfill gaurnatees by end of June. He has alos requested people not to pay thier electricity bills after june.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm