ಬ್ರೇಕಿಂಗ್ ನ್ಯೂಸ್
25-05-23 05:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25: ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಬಿಜೆಪಿ ನಾಯಕರನ್ನು ಗುರಿಯಾಗಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್, ಹರೀಶ್ ಪೂಂಜ ಮೇಲೆ ಹಿಂದಿನ ವಿಚಾರಕ್ಕೆ ಈಗ ಎಫ್ಐಆರ್ ಹಾಕಿದ್ದಾರೆ. ಅವರ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಾ? ಕಾರ್ಯಕರ್ತರನ್ನು, ಮುಖಂಡರನ್ನು ಧಮಕಿ ಹಾಕಿ ಬಾಯಿ ಮುಚ್ಚಿಸ್ತೀರಾ? ಇಷ್ಟಕ್ಕೇ ಹೆದರಿಸಲು ಸಾಧ್ಯವಾ? ಕೆಲವು ರೌಡಿಗಳು ಪೊಲೀಸರಿಗೆ ಧಮಕಿ ಹಾಕುವುದನ್ನು ನೋಡಿದ್ದೇವೆ. ಅನುಭವಿ ಅಧಿಕಾರಿಗಳಿಗೆ ಧಮಕಿ ಹಾಕುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಅವರ ಬಾಯಿ ಮುಚ್ಚಿಸೋ ಕೆಲಸ ಮಾಡಲಾಗ್ತಿದೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಇಲಾಖೆಯ ಕೇಸರೀಕರಣ ಅಂತ ಹೇಳುತ್ತಿದ್ದೀರಿ. ಅವರು ಎಂದಾದ್ರೂ ಕೇಸರಿ ಡ್ರೆಸ್ ಹಾಕೋದನ್ನು ನೋಡಿದ್ರಾ? ಪೊಲೀಸರ ಮೇಲೆ ಹಗೆತನ ತೋರುವುದು ಸರಿಯಲ್ಲ. ನೀವು ಜನರನ್ನು ವಂಚಿಸಿ, ತೇಜೋವಧೆ ಮಾಡಿ ಮತ ಪಡೆಯುವ ಕೆಲಸ ಮಾಡಿದ್ದೀರಿ ಎಂದು ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು.

ನೀರಾವರಿ ಇಲಾಖೆಯಲ್ಲಿ 40% ಕಮಿಷನ್ ಪಡೆದಿದ್ದಾರೆ. ಅಂಥವರನ್ನೆಲ್ಲಾ ಜೈಲಿಗೆ ಕಳಿಸ್ತೀನಿ ಅಂತ ಎಂಬಿ ಪಾಟೀಲ್ ಹೇಳಿದ್ದಾರೆ. ಅವರೇನು ನೀರಾವರಿ ಮಂತ್ರಿನಾ? ಅದರ ಅರ್ಥ ಅವರಿಗೆ ನೀರಾವರಿ ಮಂತ್ರಿಗಿರಿ ಬೇಕು ಅಂತ ಅಲ್ಲವೇ? ಮತ್ತೊಬ್ಬ ಸಚಿವರು ಆರ್ಎಸ್ಎಸ್, ಜರಂಗದಳ ಬ್ಯಾನ್ ಮಾಡ್ತೀನಿ ಅಂತಾರೆ. ಅದರ ಅರ್ಥ ಹೋಮ್ ಮಿನಿಸ್ಟರ್ ಬೇಕು ಅಂತ ಅಷ್ಟೆ. ಖಾತೆಗಳ ಹಂಚಿಕೆ ಆಗಿಲ್ಲ, ಆದ್ರೆ ನಾನೇ ಅದರ ವಾರಸುದಾರ ಅಂತ ಹೇಳುತ್ತಿದ್ದಾರೆ. ನಿಮ್ಮ ಈ ಬೆದರಿಕೆಗೆ ಬಿಜೆಪಿ ಸೊಪ್ಪು ಹಾಕಲ್ಲ ಎಂದು ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ.
ವಾಮ ಮಾರ್ಗವನ್ನು ಜನರಿಗೆ ತೋರಿಸಿದ್ದೀರಿ. ನೀವು ಯಾವ ಮಟ್ಟಕ್ಕೆ ಇಳಿದಿದ್ದೀರಿ ಅಂತ ಜನಕ್ಕೆ ತೋರಿಸಿದ್ದೀರಿ. ನೀವು ಮಾಡುವ ತಪ್ಪಿಗೆ ಲೈನ್ ಮ್ಯಾನ್, ಕಂಡಕ್ಟರ್ಗಳಿಗೆ ಸಮಸ್ಯೆ ಮಾಡಬೇಕಾ ಎಂದು ಅವರು ಕಾಂಗ್ರೆಸ್ನವರನ್ನು ಪ್ರಶ್ನಿಸಿದ್ದಾರೆ.
Congress trying to fix old cases on Ashwath Narayan and Harish Poonja, top Police officer's threatned by Congress leaders says chalavadi narayanaswamy.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm