ಬ್ರೇಕಿಂಗ್ ನ್ಯೂಸ್
25-05-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಮೊದಲ ಎಫ್ಐಆರ್ ಬೆಂಗಳೂರಿನಲ್ಲಿ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. ಎರಡರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವ ಸಣ್ಣ ರೈತರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಲಾಗುತ್ತದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ನಡೆಯುವ ಅಕ್ರಮ ತಡೆಯಲು ತನಿಖೆಗೆ ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣ ಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಎಂದು ತನಿಖೆ ನಡೆಸಿದ್ದ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ 2021ರ ನಡುವೆ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಯ ತನಿಖೆಯಲ್ಲಿ ತಿಳಿದುಬಂದಿತ್ತು. ಗೋಲ್ಮಾಲ್ನಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ನಾರಾಯಣ ಸ್ವಾಮಿ ತಿಳಿಸಿದ್ದರು.
Karnataka Ganga Kalyana Scheme 2023 corruption scam, FIR registered at Vidhana Soudha police station by Congress.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm