ಬ್ರೇಕಿಂಗ್ ನ್ಯೂಸ್
25-05-23 09:07 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಮೊದಲ ಎಫ್ಐಆರ್ ಬೆಂಗಳೂರಿನಲ್ಲಿ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. ಎರಡರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವ ಸಣ್ಣ ರೈತರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಲಾಗುತ್ತದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ನಡೆಯುವ ಅಕ್ರಮ ತಡೆಯಲು ತನಿಖೆಗೆ ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣ ಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಎಂದು ತನಿಖೆ ನಡೆಸಿದ್ದ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ 2021ರ ನಡುವೆ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಯ ತನಿಖೆಯಲ್ಲಿ ತಿಳಿದುಬಂದಿತ್ತು. ಗೋಲ್ಮಾಲ್ನಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ನಾರಾಯಣ ಸ್ವಾಮಿ ತಿಳಿಸಿದ್ದರು.
Karnataka Ganga Kalyana Scheme 2023 corruption scam, FIR registered at Vidhana Soudha police station by Congress.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm