ಬ್ರೇಕಿಂಗ್ ನ್ಯೂಸ್
25-05-23 09:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ, 25: ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೊಟ್ಟ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ನಗರದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸಭೆ ಕರೆದಿದ್ದರು. ಈ ಸಭೆ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರನ್ನು 'ರೌಡಿಸಂ ಮುಕ್ತ ಮಾಡುವುದು ನಮ್ಮ ಮೊದಲ ಆದ್ಯತೆ. ನಂತರ ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುತ್ತೇವೆ. ನಗರದಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳನ್ನ ಸಹಿಸುವುದಿಲ್ಲ ಎಂದರು.
ಸಾರ್ವಜನಿಕರೊಂದಿಗೆ ಪೊಲೀಸರು ಜನಸ್ನೇಹಿ ಮತ್ತು ಉತ್ತಮ ವರ್ತನೆ ತೋರುವುದು ಸಹ ಕಡ್ಡಾಯವಾಗಬೇಕು. ಸಿಬ್ಬಂದಿಗಳ ದೈಹಿಕ ಸಾಮರ್ಥ್ಯದ ಬಗ್ಗೆಯೂ ಗಮನ ಹರಿಸಲಾಗುವುದು. ಯಾರಿಗೂ ಬೆಂಗಳೂರಿನಲ್ಲಿ ಸಮಸ್ಯೆಯುಂಟು ಮಾಡಲು ಅವಕಾಶ ನೀಡುವುದಿಲ್ಲ. ಸಂಚಾರಿ ವ್ಯವಸ್ಥೆಯ ಬಗ್ಗೆಯೂ ಸಾಕಷ್ಟು ಚರ್ಚೆ ಮಾಡಲಾಗಿದೆ ಎಂದು ಅಲೋಕ್ ಮೋಹನ್ ತಿಳಿಸಿದರು.
ಇಂದು ಇನ್ಫ್ಯಾಂಟ್ರಿ ರಸ್ತೆಯ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಸೇರಲಾಗಿದ್ದು, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಹೆಚ್ಚುವರಿ ಆಯುಕ್ತರು, ಡಿಐಜಿಗಳು ಹಾಗೂ ನಗರದ ಎಲ್ಲಾ ಡಿಸಿಪಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ನೂತನ ಡಿಜಿ & ಐಜಿಪಿ ಆಗಿ ಅಲೋಕ್ ಮೋಹನ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಪ್ರಮುಖ ನಾಲ್ಕು ಪ್ರಕರಣಗಳಿಗೆ ಮರುಜೀವ ನೀಡಿದ್ದಾರೆ. ಕಾಟನ್ ಪೇಟೆ ಠಾಣೆಯಲ್ಲಿ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ದಾಖಲಾಗಿದ್ದ ನಕಲಿ ದರೋಡೆ ಪ್ರಕರಣ, ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣ, ಬಿಟ್ ಕಾಯಿನ್ ದಂಧೆ ಪ್ರಕರಣ ಹಾಗೂ ನಾಗವಾರ ಬಳಿ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ.
ಈ ನಾಲ್ಕು ಪ್ರಕರಣಗಳ ತನಿಖಾ ಹಂತ ಮತ್ತು ಸ್ಥಿತಿಗತಿಗಳ ಬಗ್ಗೆ ಅಲೋಕ್ ಮೋಹನ ಮಾಹಿತಿ ಪಡೆದಿದ್ದಾರೆ. ಎರಡು ದಿನಗಳ ಹಿಂದಷ್ಟೇ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಸಿಎಂ ಹಾಗೂ ಡಿಸಿಎಂ, ನೈತಿಕ ಪೊಲೀಸ್ ಗಿರಿ ಮತ್ತು ಇಲಾಖೆ ಕೇಸರಿಕರಣವಾಗುತ್ತಿದೆ ಎಂದು ಗರಂ ಆಗಿದ್ದರು. ಆದ್ದರಿಂದ ಈ ಎಲ್ಲಾ ವಿಚಾರಗಳ ಜೊತೆಗೆ ನಗರದ ಕಾನೂನು ಸುವ್ಯವಸ್ಥೆ, ರೌಡಿ ಚಟುವಟಿಕೆ, ಡ್ರಗ್ಸ್ ನಿಯಂತ್ರಣ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಅಧಿಕಾರಿಗಳ ಮೇಲಿನ ಆರೋಪಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಅಲ್ಲದೇ ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮವಾಗಿ ನಡೆದುಕೊಳ್ಳಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಅಲೋಕ್ ಮೋಹನ್ ನೀಡಿದ್ದಾರೆ.
ಅಶ್ವಥ್ ನಾರಾಯಣ್, ಹರೀಶ್ ಪೂಂಜ ಮೇಲೆ ಕ್ರಮ ;
ಇನ್ನು ಸಿಎನ್ ಅಶ್ವತ್ಥನಾರಾಯಣ, ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ಅಲೋಕ್ ಮೋಹನ್ ಹೇಳಿದ್ದಾರೆ.
ಈಗಾಗಲೇ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾರಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೇರಿದಂತೆ ಒಟ್ಟು ಮೂರು ಕೇಸ್ ಆಗಿದೆ, ಈ ಬಗ್ಗೆ ಏನು ಹೇಳುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಕ್ರಮ ಆಗುತ್ತೆ. ಮುಂದೆ ಎಲ್ಲವೂ ಕೆಲಸ ಅಗುತ್ತೆ ಎಂದು ಹೇಳಿದರು.
Karnataka’s new Director General and Inspector General of Police (DG & IGP) Alok Mohan held a meeting with the senior police officials in Bengaluru on Thursday for the first time after taking over the top post. He directed the Bengaluru police to work for a drug-free city and not tolerate any rowdyism in Karnataka’s capital.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm