ಬೆಂಗಳೂರನ್ನು ರೌಡಿಸಂ, ಡ್ರಗ್ಸ್ ಮುಕ್ತ ಮಾಡುವುದು ನಮ್ಮ ಗುರಿ, ರೌಡಿಗಳಿಗೆ ಖಡಕ್ ವಾರ್ನಿಂಗ್, ಅಶ್ವಥ್ ನಾರಾಯಣ್, ಹರೀಶ್ ಪೂಂಜಾ ವಿರುದ್ಧ ಕ್ರಮ ಎಂದ ಡಿಜಿ ಐಜಿಪಿ ಅಲೋಕ್ ಮೋಹನ್

25-05-23 09:39 pm       Bangalore Correspondent   ಕರ್ನಾಟಕ

ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಅವರು ಕೊಟ್ಟ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ನಗರದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸಭೆ ಕರೆದಿದ್ದರು.

ಬೆಂಗಳೂರು, ಮೇ, 25: ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಅವರು ಕೊಟ್ಟ ಖಡಕ್ ಸೂಚನೆ ನೀಡಿದ ಬೆನ್ನಲ್ಲೇ ನಗರದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಸಭೆ ಕರೆದಿದ್ದರು. ಈ ಸಭೆ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರನ್ನು 'ರೌಡಿಸಂ ಮುಕ್ತ ಮಾಡುವುದು ನಮ್ಮ ಮೊದಲ ಆದ್ಯತೆ. ನಂತರ ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡುತ್ತೇವೆ. ನಗರದಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆಗಳನ್ನ ಸಹಿಸುವುದಿಲ್ಲ ಎಂದರು.

Karnataka CM race: Siddaramaiah, D K Shivakumar meet Rahul Gandhi

ಸಾರ್ವಜನಿಕರೊಂದಿಗೆ ಪೊಲೀಸರು ಜನಸ್ನೇಹಿ ಮತ್ತು ಉತ್ತಮ ವರ್ತನೆ ತೋರುವುದು ಸಹ ಕಡ್ಡಾಯವಾಗಬೇಕು. ಸಿಬ್ಬಂದಿಗಳ ದೈಹಿಕ ಸಾಮರ್ಥ್ಯದ ಬಗ್ಗೆಯೂ ಗಮನ ಹರಿಸಲಾಗುವುದು. ಯಾರಿಗೂ ಬೆಂಗಳೂರಿನಲ್ಲಿ ಸಮಸ್ಯೆಯುಂಟು ಮಾಡಲು ಅವಕಾಶ ನೀಡುವುದಿಲ್ಲ. ಸಂಚಾರಿ ವ್ಯವಸ್ಥೆಯ ಬಗ್ಗೆಯೂ ಸಾಕಷ್ಟು ಚರ್ಚೆ ಮಾಡಲಾಗಿದೆ ಎಂದು ಅಲೋಕ್ ಮೋಹನ್ ತಿಳಿಸಿದರು.

ಇಂದು ಇನ್ಫ್ಯಾಂಟ್ರಿ ರಸ್ತೆಯ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಸೇರಲಾಗಿದ್ದು, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಹೆಚ್ಚುವರಿ ಆಯುಕ್ತರು, ಡಿಐಜಿಗಳು ಹಾಗೂ ನಗರದ ಎಲ್ಲಾ ಡಿಸಿಪಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ನೂತನ ಡಿಜಿ & ಐಜಿಪಿ ಆಗಿ ಅಲೋಕ್ ಮೋಹನ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಪ್ರಮುಖ ನಾಲ್ಕು ಪ್ರಕರಣಗಳಿಗೆ ಮರುಜೀವ ನೀಡಿದ್ದಾರೆ. ಕಾಟನ್ ಪೇಟೆ ಠಾಣೆಯಲ್ಲಿ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ದಾಖಲಾಗಿದ್ದ ನಕಲಿ ದರೋಡೆ ಪ್ರಕರಣ, ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣ, ಬಿಟ್ ಕಾಯಿನ್ ದಂಧೆ ಪ್ರಕರಣ ಹಾಗೂ ನಾಗವಾರ ಬಳಿ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣದ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ.

ಈ ನಾಲ್ಕು ಪ್ರಕರಣಗಳ ತನಿಖಾ ಹಂತ ಮತ್ತು ಸ್ಥಿತಿಗತಿಗಳ ಬಗ್ಗೆ ಅಲೋಕ್ ಮೋಹನ ಮಾಹಿತಿ ಪಡೆದಿದ್ದಾರೆ. ಎರಡು ದಿನಗಳ ಹಿಂದಷ್ಟೇ ಹಿರಿಯ ಪೊಲೀಸ್​ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಸಿಎಂ ಹಾಗೂ ಡಿಸಿಎಂ, ನೈತಿಕ ಪೊಲೀಸ್ ಗಿರಿ ಮತ್ತು ಇಲಾಖೆ ಕೇಸರಿಕರಣವಾಗುತ್ತಿದೆ ಎಂದು ಗರಂ ಆಗಿದ್ದರು. ಆದ್ದರಿಂದ ಈ ಎಲ್ಲಾ ವಿಚಾರಗಳ ಜೊತೆಗೆ ನಗರದ ಕಾನೂನು ಸುವ್ಯವಸ್ಥೆ, ರೌಡಿ ಚಟುವಟಿಕೆ, ಡ್ರಗ್ಸ್ ನಿಯಂತ್ರಣ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ, ಅಧಿಕಾರಿಗಳ ಮೇಲಿನ ಆರೋಪಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಅಲ್ಲದೇ ಸಾರ್ವಜನಿಕರೊಂದಿಗೆ ಪೊಲೀಸರು ಉತ್ತಮವಾಗಿ ನಡೆದುಕೊಳ್ಳಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಅಲೋಕ್ ಮೋಹನ್ ನೀಡಿದ್ದಾರೆ.

FIR against BJP MLAs Ashwathnarayan, Harish Poonja for hate speech  Karnataka Politics: ದ್ವೇಷ ಭಾಷಣ; ಬಿಜೆಪಿ ಶಾಸಕರಾದ ಅಶ್ವತ್ಥನಾರಾಯಣ, ಹರೀಶ್ ಪೂಂಜಾ  ವಿರುದ್ಧ ಎಫ್‌ಐಆರ್‌ Vistara News

ಅಶ್ವಥ್ ನಾರಾಯಣ್, ಹರೀಶ್ ಪೂಂಜ ಮೇಲೆ ಕ್ರಮ ; 

ಇನ್ನು ಸಿಎನ್ ಅಶ್ವತ್ಥನಾರಾಯಣ, ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ಅಲೋಕ್ ಮೋಹನ್  ಹೇಳಿದ್ದಾರೆ.

ಈಗಾಗಲೇ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾರಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೇರಿದಂತೆ ಒಟ್ಟು ಮೂರು ಕೇಸ್ ಆಗಿದೆ, ಈ ಬಗ್ಗೆ ಏನು ಹೇಳುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಕ್ರಮ ಆಗುತ್ತೆ. ಮುಂದೆ ಎಲ್ಲವೂ ಕೆಲಸ ಅಗುತ್ತೆ ಎಂದು ಹೇಳಿದರು.

Karnataka’s new Director General and Inspector General of Police (DG & IGP) Alok Mohan held a meeting with the senior police officials in Bengaluru on Thursday for the first time after taking over the top post. He directed the Bengaluru police to work for a drug-free city and not tolerate any rowdyism in Karnataka’s capital.