ಬ್ರೇಕಿಂಗ್ ನ್ಯೂಸ್
26-05-23 01:28 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26 : ಚುನಾವಣೆಗೆ ಮುಂಚೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಂಟಿ ಸಹಿಯುಳ್ಳ ಗ್ಯಾರಂಟಿ ಕಾರ್ಡ್ಗಳನ್ನು ರಾಜ್ಯದ ಪ್ರತಿ ಮನೆಗೆ ವಿತರಿಸಿ, ಕಾಂಗ್ರೆಸ್ ಅಧಿಕಾರವಹಿಸಿಕೊಂಡ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಉಚಿತ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದರು.ಈಗ ಅದನ್ನು ಪಾಲಿಸಲೇಬೇಕು ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ. ಐದು ಉಚಿತ ಗ್ಯಾರಂಟಿಗಳನ್ನು ಕೊಡಮಾಡಲಿದೆ. ದಯವಿಟ್ಟು ಕಾಂಗ್ರೆಸ್ನವರು ಹೇಳಿದ್ದನ್ನು ಜನರು ಫಾಲೋ ಮಾಡಬೇಕು.ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೊದಲ ಸಚಿವ ಸಂಪುಟ ಸಭೆಯೂ ಆಗಿರುವ ಕಾರಣ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ವತಃ ಹೇಳಿದಂತೆಯೇ ಯಾರೊಬ್ಬರೂ ಕರೆಂಟ್ ಬಿಲ್ ಕಟ್ಟಬೇಡಿ. ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲಿ. ನಾನು ಕಟ್ಟಲ್ಲ, ನೀವೂ ಕಟ್ಟಬೇಡಿ ಎಂದು ಅವರಿಬ್ಬರು ಹೇಳಿದ್ದಾರೆ. ಹೀಗಾಗಿ ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಅವಮಾನಿಸಬಾರದು ಎಂದು ರಾಜ್ಯದ ಜನರಿಗೆ ಆರ್.ಅಶೋಕ್ ಉಚಿತ ಸಲಹೆ ನೀಡಿದರು.


ಆರ್ಎಸ್ಎಸ್ ನಿಷೇಧವಲ್ಲ, ಸಂಘದ ಒಂದು ಶಾಖೆಯನ್ನು ಕಾಂಗ್ರೆಸ್ಗೆ ತಾಕತ್ತಿದ್ದರೆ ಮುಟ್ಟಲಿ ನೋಡೋಣ. ಹಿಂದುಗಳ ಧ್ವನಿಯಾಗಿರುವ ಆರ್ಎಸ್ಎಸ್, ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಪತನವಾಗಲಿದೆ ಎಂದು ಆರ್.ಅಶೋಕ್ ಎಚ್ಚರಿಸಿದರು.
ಐದು ಗ್ಯಾರಂಟಿಗಳನ್ನು ಈಡೇರಿಸಲು ಜನರು ಪಟ್ಟು ಹಿಡಿದು ಒತ್ತಡ ಹೇರಲಾರಂಭಿಸಿದ್ದು, ವಿಷಯಾಂತರ ಮಾಡಲು ನಿಷೇಧದ ಬಗ್ಗೆ ಮಾತನಾಡುತ್ತಿದ್ದಾರೆ. ರಾಹುಲ್ ಗಾಂಧಿ ಮುತ್ತಾತ, ಅಜ್ಜಿಗೂ ಆರ್ಎಸ್ಎಸ್ ತಂಟೆಗೆ ಹೋಗಲಾಗಿಲ್ಲ. ನಿಷೇಧದ ಬಗ್ಗೆ ಸದನದಲ್ಲಿ ಧಮ್ಮಿದ್ದರೆ ಬಿಲ್ ತರಲಿ ಎಂದು ಸೆಡ್ಡು ಹೊಡೆದರು.
ಸಿದ್ದರಾಮಯ್ಯ ಅವರು 13 ಬಾರಿ ಬಜೆಟ್ ಮಂಡಿಸಿದವರು. ಉಚಿತ ಗ್ಯಾರಂಟಿ ಹೇಗೆ ಜಾರಿ ಮಾಡಬೇಕು, ಅವರಿಗೆ ಎಲ್ಲ ಮಾಹಿತಿಯಿದೆ, ಹೇಳಿದಂತೆ ನಡೆಯುತ್ತಾರೆ. ಡಬಲ್ ಸ್ಟೇರಿಂಗ್ ಸರ್ಕಾರದಲ್ಲಿ ಮಂತ್ರಿ ಪದವಿ, ಮಂತ್ರಿಯಾದವರಿಗೆ ಖಾತೆ ಗ್ಯಾರಂಟಿಯೇ ಸಿಕ್ಕಿಲ್ಲ ಎಂದು ಆರ್.ಅಶೋಕ್ ವ್ಯಂಗ್ಯವಾಡಿದರು.
Let Congress touch one office of the RSS if they have guts slams R. Ashok, says don't pay the electricity bill. Even am not going pay the bill he slammed.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am