ಜೆಡಿಎಸ್ ವಿಸರ್ಜನೆ ಯಾವಾಗ ಹೇಳಿ, ಸೋಲಿನ ಹೊಣೆ ಹೊತ್ತು ರಾಜಿನಾಮೆ ನೀಡುವವರು ಯಾರು ಇಲ್ಲವೇ ಬಿಜೆಪಿಯಲ್ಲಿ ? ಕಾಂಗ್ರೆಸ್ ಟಾಂಗ್

26-05-23 07:59 pm       Bangalore Correspondent   ಕರ್ನಾಟಕ

ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕಾಂಗ್ರೆಸ್​ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ. 

ಬೆಂಗಳೂರು, ಮೇ 26 : ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕಾಂಗ್ರೆಸ್​ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ. 

ಈ ಬಗ್ಗೆ ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​, ನಾವು ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ನಿಶ್ಚಿತ. ಕುಮಾರಸ್ವಾಮಿಯವರೇ, ಆ ಚಿಂತೆ ಬಿಡಿ. ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ ಹೇಳಿ ಎಂದು ಕಾಲೆಳೆದಿದೆ. 

ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ಬಿಜೆಪಿ ಕರ್ನಾಟಕದ್ದೋ ? ಅಮಿತ್ ಷಾ ಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ?

ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?! ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪ್ರಶ್ನೆ ಮಾಡಿದೆ. ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧ ಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟಾಂಗ್ ನೀಡಿದೆ.

The state Congress has hit out at former CM Kumaraswamy, who had lashed out at Congress leaders over Congress free guarantee schemes. The state Congress tweeted in this regard, "We are sure to implement our guarantees to the eligible beneficiaries. Kumaraswamy, stop worrying. JDS party's disbandment program has started.