ಬ್ರೇಕಿಂಗ್ ನ್ಯೂಸ್
26-05-23 09:00 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 26: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಟಾಪಟಿಯ ಬಳಿಕ ಅಂತೂ ಸಚಿವರ ಪಟ್ಟಿ ಅಂತಿಮಗೊಂಡಿದೆ. ದೆಹಲಿಯಲ್ಲಿ ಶುಕ್ರವಾರ ಇಡೀ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮನೆಯಲ್ಲಿ ನಡೆಸಿದ ಸಭೆಯಲ್ಲಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಹಿರಿಯ ಶಾಸಕರನ್ನು ಸಚಿವ ಸ್ಥಾನದಿಂದ ಕೈಬಿಡಲಾಗಿದ್ದು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ ಎನ್ನುವ ಮಾಹಿತಿ ದೆಹಲಿ ಮೂಲದಿಂದ ಲಭಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಆಪ್ತರಾಗಿರುವ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ತಿನ ನಾಯಕರಾಗಿರುವ ಮತ್ತು ದಕ್ಷಿಣ ಕನ್ನಡ ಮೂಲದ ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್, ತುಮಕೂರು ಜಿಲ್ಲೆಯ ಹಿರಿಯ ಶಾಸಕ ಟಿಬಿ ಜಯಚಂದ್ರ, ಮೈಸೂರಿನ ಆರು ಬಾರಿಯ ಶಾಸಕ ತನ್ವೀರ್ ಸೇಠ್, ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ವಿನಯ ಕುಲಕರ್ಣಿಗೆ ಸಚಿವ ಸ್ಥಾನ ಸಿಕ್ಕಿಲ್ಲ. 135 ಶಾಸಕರು ಗೆದ್ದಿರುವುದರಿಂದ ಪರಿಷತ್ತಿನ ಯಾವುದೇ ಸದಸ್ಯನಿಗೂ ಸಚಿವ ಸ್ಥಾನ ನೀಡಿಲ್ಲ ಎನ್ನಲಾಗುತ್ತಿದೆ. ಡಿಕೆಶಿ ಆಪ್ತರೂ ಆಗಿರುವ ಬಿಕೆ ಹರಿಪ್ರಸಾದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಚಿವ ಸ್ಥಾನ ಖಚಿತ ಎನ್ನಲಾಗಿತ್ತು. ಆದರೆ ಸಿದ್ದರಾಮಯ್ಯ ಜೊತೆಗೆ ವೈಮನಸ್ಸು ಹೊಂದಿರುವುದರಿಂದ ಅವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎನ್ನಲಾಗುತ್ತಿದೆ.
ಮೈಸೂರಿನಿಂದ ಸಿದ್ದರಾಮಯ್ಯ ಪರಮಾಪ್ತ ಡಾ.ಎಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್, ರುದ್ರಪ್ಪ ಲಮಾಣಿ, ಎಂ.ಸಿ.ಸುಧಾಕರ್, ಬೆಳಗಾವಿ ಜಿಲ್ಲೆಯಿಂದ ಲಕ್ಷ್ಮೀ ಹೆಬ್ಬಾಳ್ಕರ್, ಕೋಲಾರದಿಂದ ಬೋಸರಾಜು, ಬಳ್ಳಾರಿ ಗ್ರಾಮೀಣ ಕ್ಷೇತ್ರದ ಬಿ. ನಾಗೇಂದ್ರ, ಆರ್.ಬಿ. ತಿಮ್ಮಾಪುರ, ಕೆ.ಎನ್.ರಾಜಣ್ಣ, ಶಿವಾನಂದ ಪಾಟೀಲ್, ಚೆಲುವರಾಯಸ್ವಾಮಿ, ಪುಟ್ಟರಂಗಶೆಟ್ಟಿ, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಭಟ್ಕಳದ ಮಂಕಾಳ ವೈದ್ಯ, ಮಧು ಬಂಗಾರಪ್ಪ, ಶಿವರಾಜ ತಂಗಡಗಿ, ಈಶ್ವರ ಖಂಡ್ರೆ, ಕಲಬುರಗಿಯ ರಹೀಂ ಖಾನ್, ಡಾ.ಶರಣ ಪ್ರಕಾಶ್ ಪಾಟೀಲ್, ನರೇಂದ್ರಸ್ವಾಮಿ, ಭೈರತಿ ಸುರೇಶ್ ಸಚಿವ ಸ್ಥಾನ ಗಿಟ್ಟಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಶನಿವಾರ ಬೆಳಗ್ಗೆ 11.30ಕ್ಕೆ ರಾಜಭವನದಲ್ಲಿ 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿರುವ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಯಾವೊಬ್ಬ ವ್ಯಕ್ತಿಯನ್ನೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ. ಈಡಿಗ-ಬಿಲ್ಲವ ಸಮುದಾಯದಿಂದ ಮಧು ಬಂಗಾರಪ್ಪಗೆ ಸಚಿವ ಸ್ಥಾನ ನೀಡಿರುವುದರಿಂದ ಮತ್ತೊಬ್ಬ ವ್ಯಕ್ತಿಗೆ ನಿರಾಕರಿಸಲಾಗಿದೆ. ಇದರಿಂದ ತೀವ್ರ ಸಿಟ್ಟು ಮತ್ತು ಬೇಸರಕ್ಕೆ ಒಳಗಾಗಿರುವ ಬಿಕೆ ಹರಿಪ್ರಸಾದ್ ಪರಿಷತ್ತಿನ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಒಟ್ಟು 24 ಸಚಿವ ಸ್ಥಾನ ಭರ್ತಿಗೊಳಿಸಲು ಅವಕಾಶ ಇತ್ತು. ಒಂದು ಸ್ಥಾನ ಬಾಕಿಯಿರಿಸಿ ಸಿದ್ದರಾಮಯ್ಯ ಸರ್ಕಾರ ಭರ್ಜರಿ ಸಂಪುಟದೊಂದಿಗೆ ಕಾರ್ಯಾರಂಭಕ್ಕೆ ಹೆಜ್ಜೆ ಹಾಕಿದೆ.
Karnataka Cabinet expansion BK Hariprasad, Jayachandra and Deshpande have no Post, 24 Ministers To Take Oath On Saturday. The names have been finalised in the meeting between Mr Siddaramaiah, his deputy DK Shivakumar and Central leaders of the party in Delhi, sources have said. The Chief Minister will meet Rahul Gandhi on Friday for a sign-off.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm