ಬ್ರೇಕಿಂಗ್ ನ್ಯೂಸ್
28-05-23 06:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 28: ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಕ್ಯಾತೆ ಶುರುವಾಗಿದ್ದು ಇದೀಗ ಸಾರಿಗೆ ಖಾತೆ ನೀಡಿದ್ದಕ್ಕೆ ರಾಮಲಿಂಗರೆಡ್ಡಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಇದೀಗ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಏರಿರುವ ಕಾಂಗ್ರೆಸ್ ಎದುರು ಸಾಲು ಸಾಲು ಸಂಕಷ್ಟಗಳು ಇದ್ದು ಅದರಲ್ಲಿ ಖಾತೆ ಹಂಚಿಕೆ ಕೂಡ ಒಂದು. ಪ್ರತಿಯೊಬ್ಬರಿಗೂ ತಮ್ಮಿಷ್ಟದ ಖಾತೆಯೇ ಸಿಗಬೇಕು ಎಂದರೆ ಹೇಗೆ? ಹೀಗಾಗಿ ಸಚಿವರಿಗೆ ಖಾತೆ ಹಂಚಿಕೆ ಮಾಡುವವರಿಗೂ ಸಂಕಷ್ಟ.
ಇದೀಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ ರಾಮಲಿಂಗಾ ರೆಡ್ಡಿಗೆ ಸಾರಿಗೆ ಇಲಾಖೆ ಜವಾಬ್ದಾರಿ ವಹಿಸಿದ್ದು ಇದರಿಂದ ಅಸಮಾಧಾನಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದು ಅವರ ನಿವಾಸಕ್ಕೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.
ಸದಾಶಿವ ನಗರ ನಿವಾಸದಿಂದ ಲಕ್ಕಸಂದ್ರದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿಗೆಂದು ತೆರಳಿದ ಡಿಕೆಶಿ ಮನವೊಲಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದಕ್ಕೂ ಮೊದಲು ರಾಮಲಿಂಗ ರೆಡ್ಡಿ ನಿವಾಸದಲ್ಲಿ ಡಿಕೆ ಸುರೇಶ್ ಬೆಳಗ್ಗೆ 11 ಗಂಟೆಯಿಂದಲೂ ಮಾತುಕತೆ ನಡೆಸುತ್ತಿದ್ದಾರೆ. ಆದರೆ ಡಿಕೆ ಸುರೇಶ್ ಮನವೊಲಿಕೆಗೂ ಬಗ್ಗದ ಕಾರಣ ಸ್ವತಃ ಡಿಕೆಶಿವಕುಮಾರ್ ಬಂದಿದ್ದು ಖಾತೆಯನ್ನು ಒಪ್ಪಿಕೊಳ್ಳಲು ಮನವಿ ಮಾಡಿದ್ದಾರೆ.
ಆದರೆ ರಾಮಲಿಂಗಾ ರೆಡ್ಡಿ ಮಾತ್ರ “ಸಾರಿಗೆ ಆದರೆ ಬೇಡವೇ ಬೇಡ, ಸಚಿವ ಸ್ಥಾನವೇ ಬೇಡ” ಎಂದು ಡಿಕೆ ಶಿವಕುಮಾರ್ ಎದುರು ಪುನರುಚ್ಚರಿಸಿದ್ದಾರೆ.
ನೂತನ ಸಚಿವ ರಾಮಲಿಂಗಾ ರೆಡ್ಡಿ ಮಾತಿನ ಪ್ರಕಾರ ಸಿಎಂ ಬಿಟ್ಟರೆ ಕ್ಯಾಬಿನೆಟ್ನಲ್ಲಿರುವ ಹಿರಿಯ ತಾನು. ತನಗೆ ಸಾರಿಗೆ ಇಲಾಖೆಯಂತ ಸಣ್ಣ ಖಾತೆಯನ್ನು ನೀಡುವುದು ಬೇಡ. ಕೃಷ್ಣಭೈರೇಗೌಡಗೆ ಕಂದಾಯ ಕೊಟ್ಟಿದ್ದೀರಿ. ಅಂತಹ ಪ್ರಮುಖ ಖಾತೆಯನ್ನೇ ತನಗೆ ನೀಡಬಹುದಿತ್ತು. ಸಾರಿಗೆ ಇಲಾಖೆಯನ್ನು ತಾನು ಹಿಂದೆ ನಾಲ್ಕೂವರೆ ವರ್ಷ ನಿಭಾಯಿಸಿದ್ದೇನೆ. ತನಗಿಂತ ಕಿರಿಯರಿಗೆಲ್ಲ ಪ್ರಮುಖ ಖಾತೆಗಳನ್ನು ನೀಡಿದ್ದು ತನಗೆ ಮಾಡಿರೋ ಅವಮಾನ. ಅವಮಾನ ಮಾಡಿಕೊಂಡು ಖಾತೆ ನಿಭಾಯಿಸುವುದಕ್ಕಿಂತ ಸಚಿವ ಸ್ಥಾನವೇ ಬೇಡ. ಇದೇ ವಾದವನ್ನು ರಾಮಲಿಂಗಾ ರೆಡ್ಡಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಎದುರು ಮುಂದಿಟ್ಟು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Ramalinga Reddy to resign from cabinet post of Congres, says disappointed to be minister for transport, DK Shivakumar convinces reddy. Says i am a Senior political after Cm Siddaramaiah i should have got prominent post in the cabinet as minister. MLAs younger than me have got efficient post he added.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am