ನಂದಿಬೆಟ್ಟಕ್ಕೆ ಹೋಗಿದ್ದ ನಾಲ್ವರು ಯುವಕರು ಕೆರೆಯಲ್ಲಿ ಮುಳುಗಿ ಸಾವು ; ಇಬ್ಬರ ಮೃತದೇಹ ಪತ್ತೆ  

29-05-23 12:56 pm       Bangalore Correspondent   ಕರ್ನಾಟಕ

ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.

ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.

ಬೈಕ್​ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್​.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.

ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್‌ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್‌ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್​ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.

4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.