ಬ್ರೇಕಿಂಗ್ ನ್ಯೂಸ್
30-05-23 03:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕರೊನಾ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ವರದಿಯಲ್ಲಿ ಏನಿರುತ್ತದೆ ಎಂಬುದನ್ನು ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಕರೊನಾ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದು, ದುರದೃಷ್ಟವಶಾತ್ ಆಕ್ಸಿಜನ್ ದುರಂತಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಇನ್ನೂ ತನಿಖೆ ಪೂರ್ಣ ತನಿಖೆ ಮಾಡಿಲ್ಲ. ಇದೀಗ ಮರು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆಕ್ಸಿಜನ್ ದುರಂತ ಪ್ರಕರಣದಲ್ಲಿ ಯಾರಿಂದ ಲೋಪದೋಷ ಉಂಟಾಗಿದೆಯೋ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನ್ಯಾಯಾಲಯದಿಂದ ಪ್ರಕರಣದ ಕುರಿತು ತೀರ್ಪು ಬಂದಿದೆ. ಆದರೆ ಇಲಾಖೆಯಿಂದ ಸರಿಯಾದ ತನಿಖೆ ನಡೆದಿಲ್ಲ. ಮತ್ತೊಮ್ಮೆ ಸರಿಯಾದ ತನಿಖೆ ನಡೆಸುಂತೆ ಸೂಚಿಸಿದ್ದೇನೆ ಎಂದರು.
ಏನಿದು ಆಕ್ಸಿಜನ್ ದುರಂತ?
ಕರೊನಾ 2ನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಂಗ್ರಹದ ಅಸಮರ್ಪಕ ನಿರ್ವಹಣೆಯಿಂದ 36 ಕರೊನಾ ಸೋಂಕಿತರು ಮೃತಪಟ್ಟಿದ್ದರು. ಆಕ್ಸಿಜನ್ ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ನ್ಯಾಯಮೂರ್ತಿ ವೇಣುಗೋಪಾಲ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ ಈ ಹಿಂದಿನ ಸರ್ಕಾರ ಮಾತ್ರ ದುರಂತಕ್ಕೆ ಯಾರನ್ನೂ ಹೊಣೆ ಮಾಡಿರಲಿಲ್ಲ. ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ನ್ಯಾಯಾಂಗ ತನಿಖಾ ವರದಿ ಇನ್ನೂ ಬಹಿರಂಗವಾಗಿಲ್ಲ.
Oxygen tragedy in Chamarajanagar, health minister Dinesh Gundu Rao orders for reinvestigation of case.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am