ಬ್ರೇಕಿಂಗ್ ನ್ಯೂಸ್
30-05-23 03:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕರೊನಾ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ವರದಿಯಲ್ಲಿ ಏನಿರುತ್ತದೆ ಎಂಬುದನ್ನು ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಕರೊನಾ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದು, ದುರದೃಷ್ಟವಶಾತ್ ಆಕ್ಸಿಜನ್ ದುರಂತಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಇನ್ನೂ ತನಿಖೆ ಪೂರ್ಣ ತನಿಖೆ ಮಾಡಿಲ್ಲ. ಇದೀಗ ಮರು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆಕ್ಸಿಜನ್ ದುರಂತ ಪ್ರಕರಣದಲ್ಲಿ ಯಾರಿಂದ ಲೋಪದೋಷ ಉಂಟಾಗಿದೆಯೋ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನ್ಯಾಯಾಲಯದಿಂದ ಪ್ರಕರಣದ ಕುರಿತು ತೀರ್ಪು ಬಂದಿದೆ. ಆದರೆ ಇಲಾಖೆಯಿಂದ ಸರಿಯಾದ ತನಿಖೆ ನಡೆದಿಲ್ಲ. ಮತ್ತೊಮ್ಮೆ ಸರಿಯಾದ ತನಿಖೆ ನಡೆಸುಂತೆ ಸೂಚಿಸಿದ್ದೇನೆ ಎಂದರು.
ಏನಿದು ಆಕ್ಸಿಜನ್ ದುರಂತ?
ಕರೊನಾ 2ನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಂಗ್ರಹದ ಅಸಮರ್ಪಕ ನಿರ್ವಹಣೆಯಿಂದ 36 ಕರೊನಾ ಸೋಂಕಿತರು ಮೃತಪಟ್ಟಿದ್ದರು. ಆಕ್ಸಿಜನ್ ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ನ್ಯಾಯಮೂರ್ತಿ ವೇಣುಗೋಪಾಲ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ ಈ ಹಿಂದಿನ ಸರ್ಕಾರ ಮಾತ್ರ ದುರಂತಕ್ಕೆ ಯಾರನ್ನೂ ಹೊಣೆ ಮಾಡಿರಲಿಲ್ಲ. ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ನ್ಯಾಯಾಂಗ ತನಿಖಾ ವರದಿ ಇನ್ನೂ ಬಹಿರಂಗವಾಗಿಲ್ಲ.
Oxygen tragedy in Chamarajanagar, health minister Dinesh Gundu Rao orders for reinvestigation of case.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm