ಬ್ರೇಕಿಂಗ್ ನ್ಯೂಸ್
30-05-23 03:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕರೊನಾ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ವರದಿಯಲ್ಲಿ ಏನಿರುತ್ತದೆ ಎಂಬುದನ್ನು ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಕರೊನಾ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದು, ದುರದೃಷ್ಟವಶಾತ್ ಆಕ್ಸಿಜನ್ ದುರಂತಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಇನ್ನೂ ತನಿಖೆ ಪೂರ್ಣ ತನಿಖೆ ಮಾಡಿಲ್ಲ. ಇದೀಗ ಮರು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆಕ್ಸಿಜನ್ ದುರಂತ ಪ್ರಕರಣದಲ್ಲಿ ಯಾರಿಂದ ಲೋಪದೋಷ ಉಂಟಾಗಿದೆಯೋ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನ್ಯಾಯಾಲಯದಿಂದ ಪ್ರಕರಣದ ಕುರಿತು ತೀರ್ಪು ಬಂದಿದೆ. ಆದರೆ ಇಲಾಖೆಯಿಂದ ಸರಿಯಾದ ತನಿಖೆ ನಡೆದಿಲ್ಲ. ಮತ್ತೊಮ್ಮೆ ಸರಿಯಾದ ತನಿಖೆ ನಡೆಸುಂತೆ ಸೂಚಿಸಿದ್ದೇನೆ ಎಂದರು.
ಏನಿದು ಆಕ್ಸಿಜನ್ ದುರಂತ?
ಕರೊನಾ 2ನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಂಗ್ರಹದ ಅಸಮರ್ಪಕ ನಿರ್ವಹಣೆಯಿಂದ 36 ಕರೊನಾ ಸೋಂಕಿತರು ಮೃತಪಟ್ಟಿದ್ದರು. ಆಕ್ಸಿಜನ್ ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ನ್ಯಾಯಮೂರ್ತಿ ವೇಣುಗೋಪಾಲ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ ಈ ಹಿಂದಿನ ಸರ್ಕಾರ ಮಾತ್ರ ದುರಂತಕ್ಕೆ ಯಾರನ್ನೂ ಹೊಣೆ ಮಾಡಿರಲಿಲ್ಲ. ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ನ್ಯಾಯಾಂಗ ತನಿಖಾ ವರದಿ ಇನ್ನೂ ಬಹಿರಂಗವಾಗಿಲ್ಲ.
Oxygen tragedy in Chamarajanagar, health minister Dinesh Gundu Rao orders for reinvestigation of case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm