ಬ್ರೇಕಿಂಗ್ ನ್ಯೂಸ್
30-05-23 03:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕರೊನಾ ಸಮಯದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ವರದಿಯಲ್ಲಿ ಏನಿರುತ್ತದೆ ಎಂಬುದನ್ನು ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಕರೊನಾ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದು, ದುರದೃಷ್ಟವಶಾತ್ ಆಕ್ಸಿಜನ್ ದುರಂತಕ್ಕೆ ಯಾರು ಕಾರಣ ಎಂಬುದರ ಬಗ್ಗೆ ಇನ್ನೂ ತನಿಖೆ ಪೂರ್ಣ ತನಿಖೆ ಮಾಡಿಲ್ಲ. ಇದೀಗ ಮರು ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಆಕ್ಸಿಜನ್ ದುರಂತ ಪ್ರಕರಣದಲ್ಲಿ ಯಾರಿಂದ ಲೋಪದೋಷ ಉಂಟಾಗಿದೆಯೋ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನ್ಯಾಯಾಲಯದಿಂದ ಪ್ರಕರಣದ ಕುರಿತು ತೀರ್ಪು ಬಂದಿದೆ. ಆದರೆ ಇಲಾಖೆಯಿಂದ ಸರಿಯಾದ ತನಿಖೆ ನಡೆದಿಲ್ಲ. ಮತ್ತೊಮ್ಮೆ ಸರಿಯಾದ ತನಿಖೆ ನಡೆಸುಂತೆ ಸೂಚಿಸಿದ್ದೇನೆ ಎಂದರು.
ಏನಿದು ಆಕ್ಸಿಜನ್ ದುರಂತ?
ಕರೊನಾ 2ನೇ ಅಲೆ ತೀವ್ರವಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಂಗ್ರಹದ ಅಸಮರ್ಪಕ ನಿರ್ವಹಣೆಯಿಂದ 36 ಕರೊನಾ ಸೋಂಕಿತರು ಮೃತಪಟ್ಟಿದ್ದರು. ಆಕ್ಸಿಜನ್ ದುರಂತಕ್ಕೆ ಅಂದಿನ ಜಿಲ್ಲಾಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂದು ನ್ಯಾಯಮೂರ್ತಿ ವೇಣುಗೋಪಾಲ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ ಹೇಳಿತ್ತು. ಆದರೆ ಈ ಹಿಂದಿನ ಸರ್ಕಾರ ಮಾತ್ರ ದುರಂತಕ್ಕೆ ಯಾರನ್ನೂ ಹೊಣೆ ಮಾಡಿರಲಿಲ್ಲ. ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ನ್ಯಾಯಾಂಗ ತನಿಖಾ ವರದಿ ಇನ್ನೂ ಬಹಿರಂಗವಾಗಿಲ್ಲ.
Oxygen tragedy in Chamarajanagar, health minister Dinesh Gundu Rao orders for reinvestigation of case.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm