ಬ್ರೇಕಿಂಗ್ ನ್ಯೂಸ್
30-05-23 10:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ನೀರಾವರಿ ಇಲಾಖೆಯ ಸಭೆಯನ್ನು ಕರೆದು ಮೇಕೆದಾಟು ಯೋಜನೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
ಚುನಾವಣೆಗೂ ಮುನ್ನ ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿ, ಈಗ ಮತ್ತೆ ಯೋಜನೆ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದಿದೆ. ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ಬೆಂಗಳೂರಿನ ನೀರಿನ ಬವಣೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡು ಯೋಜನೆ ವಿರುದ್ಧ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯುಎಂಎ) ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಈ ಯೋಜನೆಗೆ ರೂ. 9,000 ಕೋಟಿ (2019 ದರಗಳು) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. 'ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ' ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಕರ್ನಾಟಕಕ್ಕೆ ಹಂಚಿಕೆಯಾದ ಹೆಚ್ಚುವರಿ 4.75 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಈ ಯೋಜನೆ ಅವಕಾಶ ನೀಡಲಿದೆ.
67.16 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲು ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲಾಗುತ್ತದೆ. 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯುನಿಟ್ಗಳನ್ನು ನಿರ್ಮಿಸಬೇಕಿದೆ. ಇತರ ಮೂಲಸೌಕರ್ಯಗಳು, ನೀರನ್ನು ಎತ್ತುವ ಜಾಕ್ವೆಲ್- ಕಮ್- ಪಂಪ್ಹೌಸ್ಗಳ ನಿರ್ಮಾಣ ಯೋಜನೆಯ ಪ್ರಮುಖ ಅಂಶಗಳಾಗಿವೆ. ಯೋಜನೆಗೆ ಒಟ್ಟು 12,979 ಎಕರೆ ಭೂಮಿ ಅಗತ್ಯವಿದ್ದರೆ, ಇದರಲ್ಲಿ 12,345.4 ಎಕರೆ ಮುಳುಗಡೆಯಾಗಲಿದೆ. 500 ಎಕರೆ ಕಂದಾಯ ಭೂಮಿಯನ್ನು ಉಳಿಸಿಕೊಳ್ಳಲಾಗುತ್ತದೆ. ನೀರು ಪಾಲಾಗುವ ಉಳಿದ ಜಮೀನು ಪರಿಸರ ಸೂಕ್ಷ್ಮ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಸುತ್ತಮುತ್ತಲಿನ ಅರಣ್ಯಗಳಿಗೆ ಸೇರಿದೆ.
ವನ್ಯಜೀವಿಗಳ ಆವಾಸಸ್ಥಾನವು ಕುಗ್ಗುತ್ತಿರುವ ಸಮಯದಲ್ಲಿ ಸಂರಕ್ಷಿತ ಪ್ರದೇಶದ ದೊಡ್ಡ ಪ್ರದೇಶಗಳನ್ನು ಮುಳುಗಿಸುವುದು ವನ್ಯಜೀವಿ ಸಂಕುಲಕ್ಕೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ.
The Mekedatu project, one of the first issues the Congress raised to garner support for the elections, is back in the spotlight with Deputy Chief Minister D K Shivakumar, who holds the Water Resources portfolio, calling a meeting of the irrigation department on Tuesday.
28-03-24 11:00 pm
HK News Desk
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
Yathindra Siddaramaiah, Amit Shah Gunda, rowd...
28-03-24 09:36 pm
Bangalore NIA arrest, Cafe blast, terror: ರಾಮ...
28-03-24 08:44 pm
Davangere Congress, Shamanur family, Vinay ku...
28-03-24 04:14 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 09:32 am
HK NEWS
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm